Webdunia - Bharat's app for daily news and videos

Install App

ಅನುದಾನ ಕೊಡದೇ ಅಭಿವೃದ್ಧಿ ಹೇಗೆ? ಸಭಾಪತಿ ಮುಂದೆ ಶಾಸಕರ ಅಳಲು

Webdunia
ಮಂಗಳವಾರ, 3 ಆಗಸ್ಟ್ 2021 (19:52 IST)
ಅನುದಾನ ನೀಡದೇ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದು ಹೇಗೆ ಎಂದು ಶಾಸಕರು ಸರ್ಕಾರದ ಅನುದಾನ ವಿತರಣೆಯಲ್ಲಿ ಆಗುತ್ತಿರುವ ತಾರತಮ್ಯ ವಿಚಾರವಾಗಿ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸಭೆಯಲ್ಲಿ ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಹೊರಟ್ಟಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳೋದಾದ್ರೆ ಜಿಲ್ಲಾಧಿಕಾರಿಗಳು ಕಿರುಕುಳ ಕೊಡುತ್ತಾರೆ ಎಂದರು.
ಜಿಲ್ಲಾಧಿಕಾರಿಗಳು ಅನುದಾನ ಹಂಚಿಕೆಯಲ್ಲಿ ಅಡ್ಡ ಬರ್ತಾರೆ ಎಂಬ ಆರೋಪ ಬರುತ್ತಾ ಇದೆ. ಪ್ರತಿವರ್ಷ 700 ಕೋಟಿ ಬಜೆಟ್ ನಲ್ಲಿ ಮೀಸಲಿಡಲಾಗುತ್ತೆ. ಆದರೂ ಈ ರೀತಿ ಸಮಸ್ಯೆಗಳಾಗೋದ್ರಿಂದ ಈಗಾಗಲೇ ಎಲ್ಲಾ ಶಾಸಕರು ಸಲಹೆಗಳನ್ನು ನೀಡಿದ್ದಾರೆ. ಹಾಗಾಗಿ ಇನ್ನೊಂದು ಸಾರಿ ಸಭೆ ಕರೆದು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಆಗಸ್ಟ 14 ರೊಳಗೆ ಅನುದಾನ ಬಿಡುಗಡೆ ಮಾಡಿಸೋಕೆ ಪ್ರಯತ್ನ ಮಾಡ್ತೀನಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments