ಚೆನ್ನೈ ಪರಿಸ್ಥಿತಿಯೇ ಬೆಂಗಳೂರಿಗೂ ಬರುತ್ತದೆ ಎಂದು ನಾನು ಹೇಳಿದೆ. ಆದರೆ, ಅಧಿಕಾರಿಗಳು ನನ್ನ ಹೇಳಿಕೆಯನ್ನು ನಿರ್ಲಕ್ಷಿಸಿದ್ದರು. ಇದೀಗ ಮಳೆಗಾಲದಲ್ಲಿ ಅಂತಹ ಪರಿಸ್ಥಿತಿ ಬಂದಿದೆ ಎಂದು ಸಭಾಪತಿ ಕೆ.ಬಿ.ಕೋಳಿವಾಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆ ಒತ್ತುವರಿ ಕುರಿತು ವರದಿ ನೀಡುವಂತೆ ಕೇಳಿಕೊಂಡಿದ್ದೆ. ಆದರೆ, ವರದಿ ನೀಡುವ ಮೊದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಅಕ್ರಮವಾಗಿ ಒತ್ತುವರಿಯಾದ ಪ್ರದೇಶದಲ್ಲಿ ನಿರ್ಮಾಣವಾದ ಕಟ್ಟಡಗಳನ್ನು ತೆರವುಗೊಳಿಸುವುದು ತಪ್ಪಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಆದೇಶದ ಮೇರೆಗೆ ತೆರವು ಕಾರ್ಯಚರಣೆ ನಡೆಯುತ್ತಿದೆ ಎಂದು ಸಭಾಪತಿ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.