ಡಿಕೆಶಿ, ಜಮೀರ್ ಅಹಮ್ಮದ್ ಗೆ ಸದನದಲ್ಲೇ ಸಭಾಪತಿಗಳಿಂದ ಕ್ಲಾಸ್!

Webdunia
ಗುರುವಾರ, 5 ಜುಲೈ 2018 (09:20 IST)
ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಆರಂಭವಾಗಿ ಎರಡು ದಿನಗಳ ಕಳೆದರೂ ಶಾಸಕರು, ಸಚಿವರ ಗೈರು ಹಾಜರಾತಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕೆಂಗಣ್ಣಿಗೆ ಕಾರಣವಾಗಿದೆ.

ತಡವಾಗಿ ಸದನಕ್ಕೆ ಬಂದ ಸಚಿವ ಡಿಕೆ ಶಿವಕುಮಾರ್, ಜಮೀರ್ ಅಹಮ್ಮದ್ ಗೆ ಸ್ಪೀಕರ್ ರಮೇಶ್ ಕುಮಾರ್ ಕ್ಲಾಸ್ ತೆಗೆದುಕೊಂಡ ಘಟನೆ ನಿನ್ನೆಯ ಕಲಾಪದಲ್ಲಿ ನಡೆದಿದೆ.

ಶಾಸಕರು, ಸಚಿವರುಗಳು ಬಹುಪಾಲು ಗೈರು ಹಾಜರಾಗಿರುವುದನ್ನು ನೋಡಿ ಕೆಂಡಾಮಂಡಲರಾದ ಸ್ಪೀಕರ್, 15 ನಿಮಿಷದೊಳಗೆ ಸದನಕ್ಕೆ ಹಾಜರಾಗುವಂತೆ ನೋಡಿಕೊಳ್ಳಲು ಆದೇಶ ನೀಡಿದಾಗ ಸಿಎಂ, ಡಿಸಿಎಂ ತಬ್ಬಿಬ್ಬಾದರು. ಸದನಕ್ಕೆ ಬಾರದೇ ಇದ್ದರೆ ಮೊದಲೇ ಅನುಮತಿ ಪಡೆದಿರಬೇಕು ಎಂದು ಗದರಿದರು.

ಇನ್ನು ಸದನದಲ್ಲಿ ಕಲಾಪ ನಡೆಯುತ್ತಿರುವಾಗಲೇ ಅತ್ತಿತ್ತ ಓಡಾಡುತ್ತಿದ್ದ ಶಾಸಕರನ್ನು ನೋಡಿ ಸಿಟ್ಟಿಗೆದ್ದ ಸ್ಪೀಕರ್, ಇದೇನು ಸಂತೆಯಾ? ನಮ್ಮೂರಿನ ಸಂತೆಯೂ ಹೀಗೇ ಇರುತ್ತದೆ ಎಂದು ವ್ಯಂಗ್ಯವಾಡಿದರು. ಅಷ್ಟೇ ಅಲ್ಲ ಸದನ ಆರಂಭವಾಗಿ ಕೆಲವು ಸಮಯದ ನಂತರ ಆಗಮಿಸಿದ ಡಿಕೆ ಶಿವಕುಮಾರ್ ನೋಡಿ ನೋಡಿ ಪವರ್ ಮಿನಿಸ್ಟ್ರೀ ಬಂದ ತಕ್ಷಣ ಸದನಕ್ಕೆ ಕರೆಂಟ್ ಬಂತು ನೋಡ್ರೀ ಎಂದರು. ಇನ್ನು, ತಡವಾಗಿ ಬಂದ ಮತ್ತೊಬ್ಬ ಸಚಿವ ಜಮೀರ್ ಅಹಮ್ಮದ್ ಬಳಿ ಆಪ್ ಕಹಾಂ ಗಯೇ ಥೇ? ಎಂದು ಹಿಂದಿಯಲ್ಲಿ ಕೇಳಿ ಕಾಲೆಳೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಮುಂದಿನ ಸುದ್ದಿ
Show comments