ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ

Webdunia
ಬುಧವಾರ, 10 ಜುಲೈ 2019 (12:53 IST)
ಬೆಂಗಳೂರು : ಮೈತ್ರಿ ಸರ್ಕಾರದ ಹಲವು ಶಾಸಕರು ರಾಜೀನಾಮೆ ನೀಡಿದ್ದರೂ ಕೂಡ ಸ್ಪೀಕರ್ ರಮೇಶ್ ಕುಮಾರ್ವರು ಇನ್ನೂ ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡಿಲ್ಲ.  ಈ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.




ರಾಜ್ಯದ ಮೈತ್ರಿ ಸರ್ಕಾರ ತಾಂತ್ರಿಕವಾಗಿ ಬಹುಮತ ಕಳೆದುಕೊಂಡಿರುವ ಪರಿಣಾಮ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯ 105 ಶಾಸಕರು ವಿಧಾನಸೌಧದ ಗಾಂಧಿ ಚೌಕದ ಎದುರು ಧರಣಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ.


“ಎಲ್ಲಾ ಪಕ್ಷದವರೂ ಸರ್ವಾನುಮತದಿಂದ ಕೆ.ಆರ್. ರಮೇಶ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದೇವೆ. ಆದರೆ, ಅವರು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕ್ರಮಬದ್ಧವಲ್ಲದ ರಾಜೀನಾಮೆ ನೀಡಿದವರು ಮತ್ತೊಮ್ಮೆ ಬಂದು ಸರಿಯಾದ ಮಾದರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಾರೆ. ಆದರೆ, ರಾಜೀನಾಮೆಗಳು ಕ್ರಮಬದ್ಧವಾಗಿದೆ ಎಂದು ಅವರೇ ಹೇಳಿರುವ ರಾಜೀನಾಮೆಗಳನ್ನಾದರೂ ಕೂಡಲೇ ಕಾನೂನು ಬದ್ಧಬವಾಗಿ ಅಂಗೀಕಾರ ಮಾಡಲಿ" ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸಿಐಡಿಹೆ ನೀಡುವ ಬಗ್ಗೆ ಪರಮೇಶ್ವರ್‌ ಮಹತ್ವದ ಸಂದೇಶ

ನಟ ವಿಜಯ್ ದಳಪತಿ ಸಿನಿಮಾಗೆ ನಿರಾಳ, ಸಿಕ್ಕಿದ ಪ್ರಮಾಣ ಪತ್ರ ಯಾವುದು ಗೊತ್ತಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments