Webdunia - Bharat's app for daily news and videos

Install App

ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ

Webdunia
ಬುಧವಾರ, 10 ಜುಲೈ 2019 (12:53 IST)
ಬೆಂಗಳೂರು : ಮೈತ್ರಿ ಸರ್ಕಾರದ ಹಲವು ಶಾಸಕರು ರಾಜೀನಾಮೆ ನೀಡಿದ್ದರೂ ಕೂಡ ಸ್ಪೀಕರ್ ರಮೇಶ್ ಕುಮಾರ್ವರು ಇನ್ನೂ ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡಿಲ್ಲ.  ಈ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.




ರಾಜ್ಯದ ಮೈತ್ರಿ ಸರ್ಕಾರ ತಾಂತ್ರಿಕವಾಗಿ ಬಹುಮತ ಕಳೆದುಕೊಂಡಿರುವ ಪರಿಣಾಮ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯ 105 ಶಾಸಕರು ವಿಧಾನಸೌಧದ ಗಾಂಧಿ ಚೌಕದ ಎದುರು ಧರಣಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ.


“ಎಲ್ಲಾ ಪಕ್ಷದವರೂ ಸರ್ವಾನುಮತದಿಂದ ಕೆ.ಆರ್. ರಮೇಶ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದೇವೆ. ಆದರೆ, ಅವರು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕ್ರಮಬದ್ಧವಲ್ಲದ ರಾಜೀನಾಮೆ ನೀಡಿದವರು ಮತ್ತೊಮ್ಮೆ ಬಂದು ಸರಿಯಾದ ಮಾದರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಾರೆ. ಆದರೆ, ರಾಜೀನಾಮೆಗಳು ಕ್ರಮಬದ್ಧವಾಗಿದೆ ಎಂದು ಅವರೇ ಹೇಳಿರುವ ರಾಜೀನಾಮೆಗಳನ್ನಾದರೂ ಕೂಡಲೇ ಕಾನೂನು ಬದ್ಧಬವಾಗಿ ಅಂಗೀಕಾರ ಮಾಡಲಿ" ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments