ಸಂತಾಪ ಸೂಚಿಸುವಾಗ ಸ್ವಲ್ಪವಾದ್ರೂ ಗೌರವ ಕೊಡಿ ಮಾರಾಯ್ರೇ: ಶಾಸಕರಿಗೆ ಸ್ಪೀಕರ್ ಯುಟಿ ಖಾದರ್ ಕ್ಲಾಸ್

Krishnaveni K
ಸೋಮವಾರ, 9 ಡಿಸೆಂಬರ್ 2024 (14:22 IST)
ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ ಗದ್ದಲ ಮಾಡುತ್ತಿದ್ದ ಶಾಸಕರಿಗೆ ಸ್ಪೀಕರ್ ಯುಟಿ ಖಾದರ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶಾಸಕ ಶಿವಲಿಂಗೇಗೌಡರು ಎದ್ದು ನಿಂತು ಸಂತಾಪ ಸೂಚಿಸಲು ಮುಂದಾದಾಗ ಕೆಲವು ಶಾಸಕರು ಎದ್ದು ನಿಂತು ಓಡಾಡುವುದು, ತಮ್ಮ ಸಹ ಸದಸ್ಯರ ಜೊತೆ ಮಾತುಕತೆಯಲ್ಲಿ ಮುಳುಗಿದ್ದರು. ಇದು ಸ್ಪೀಕರ್ ಯುಟಿ ಖಾದರ್ ಗಮನಕ್ಕೆ ಬಂದಿದ್ದು, ಅಸಮಾಧಾನಕ್ಕೆ ಕಾರಣವಾಯಿತು.

ಸದನದಲ್ಲಿ ಸಂತಾಪ ಸೂಚನೆ ಎಂದರೆ ಅದು ಅಗಲಿದ ಗಣ್ಯರಿಗೆ ಗೌರವ ಸಮರ್ಪಿಸುವ ಒಂದು ಕ್ರಮ. ಆದರೆ ಈ ವೇಳೆ ಗಂಭೀರತೆ ಮರೆತು ತಮ್ಮದೇ ಲೋಕದಲ್ಲಿದ್ದ ಶಾಸಕರಿಗೆ ಸ್ಪೀಕರ್ ತಮ್ಮದೇ ಶೈಲಿಯಲ್ಲಿ ತರಾಟೆಗೆ ತೆಗೆದುಕೊಂಡರು. ಸಂತಾಪ ಸೂಚಿಸುವಾಗ ಸ್ವಲ್ಪವಾದರೂ ಗೌರವ ಕೊಡಿ ಮಾರಾಯ್ರೇ.ನಿಮ್ಮ ಮನೆಯಲ್ಲಿ ಯಾರಾದರೂ ತೀರಿಕೊಂಡಾಗ ಹೀಗೆ ಮಾಡಿದ್ರೆ ಆಗ್ತದಾ ಎಂದರು.

‘ಅಗಲಿದವರ ಕುಟುಂಬದವರು ಟಿವಿಯಲ್ಲಿ ಸಂತಾಪ ಸೂಚನೆಯನ್ನು ನೋಡುತ್ತಿರುತ್ತಾರೆ. ಅವರಿಗೆ ಸ್ವಲ್ಪವಾದರೂ ಗೌರವ ಕೊಡಿ. ಸಂತಾಪ ಸೂಚನೆ ಮಾಡುವಾಗ ನಿಮ್ಮ ಪಾಡಿಗೆ ನೀವು ಮಾತನಾಡುತ್ತಿದ್ದರೆ ಹೇಗೆ? ಚೆಲುವರಾಯಸ್ವಾಮಿಯವರೇ ಸಂತಾಪ ಸೂಚಿಸುವವರೆಗೂ ಸ್ವಲ್ಪ ಕುಳಿತುಕೊಳ್ಳಿ’ ಎಂದು ಸ್ಪೀಕರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳಿಕ ಸದಸ್ಯರು ಸೈಲೆಂಟ್ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments