Publish Date: Wed, 06 May 2026 (11:27 IST)
Updated Date: Wed, 06 May 2026 (11:30 IST)
ಬೆಂಗಳೂರು: ಮರು ಮತ ಎಣಿಕೆ ಬಳಿಕ ಶೃಂಗೇರಿ ಶಾಸಕರಾಗಿ ಆಯ್ಕೆಯಾದ ಬಿಜೆಪಿ ಜೀವರಾಜ್ ಪ್ರಮಾಣ ವಚನಕ್ಕೆ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಿಯೋಗ ದೂರು ಸಲ್ಲಿಸಿದ್ದು, ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಕೋರ್ಟ್ ಆದೇಶದ ನಂತರ ನಡೆದ ಮರುಎಣಿಕೆಯಲ್ಲಿ ಜೀವರಾಜ್ ಅವರು ಅಧಿಕೃತವಾಗಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಸ್ಪೀಕರ್ ಯು.ಟಿ. ಖಾದರ್ ಅವರು ಪ್ರಮಾಣ ವಚನ ನೀಡುವಲ್ಲಿ ನಿರಂತರ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಈ ಕುರಿತು ಸ್ಪೀಕರ್ ಅವರನ್ನು ಸಂಪರ್ಕಿಸಿದಾಗ “ನಾಳೆ, ನಾಡಿದ್ದು” ಎನ್ನುವ ಉತ್ತರ ನೀಡುತ್ತಾ, ಕಾನೂನು ಸಲಹೆ ಪಡೆಯಬೇಕೆಂದು ಹೇಳುತ್ತಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್ ನಾನು ಯಾವುದೇ ತಡ ಮಾಡಿಲ್ಲ. ಸಂವಿಧಾನದ ಚೌಕಟ್ಟಿನಡಿಯಲ್ಲಿಯೇ ಕೆಲಸ ಮಾಡುತ್ತಿದ್ದೇನೆ. ನಿನ್ನೆಯಷ್ಟೇ ನನ್ನ ಬಳಿ ಸಮಯ ಕೋರಿದ್ದಾರೆ. ಕಾನೂನು ಸಲಹೆ ಪಡೆದು ಕೊಡ್ತೇನೆ ಎಂದಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ