Webdunia - Bharat's app for daily news and videos

Install App

ಶಾಸಕರಿಗೆ ನಿದ್ರೆ ಮಾಡುವ ಚೇರ್ ದುಡ್ಡು ಕೊಡದೇ ತಂದಿದ್ದು: ಸ್ಪೀಕರ್ ಯುಟಿ ಖಾದರ್

Krishnaveni K
ಗುರುವಾರ, 6 ಮಾರ್ಚ್ 2025 (12:30 IST)
Photo Credit: X
ಬೆಂಗಳೂರು: ವಿಧಾನಸಭೆಯಲ್ಲಿ ಶಾಸಕರು ಮಧ್ಯಾಹ್ನದ ವೇಳೆ ಸಣ್ಣ ನಿದ್ರೆ ಮಾಡಲು ಅನುಕೂಲವಾಗುವಂತಹ ಚೇರ್ ವಿಚಾರವಾಗಿ ಎದ್ದಿರುವ ವಿವಾದಗಳಿಗೆ ಸ್ಪಿಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದು ಇದಕ್ಕೆ ಯಾವುದೇ ಖರ್ಚು ಮಾಡಿಲ್ಲ ಎಂದಿದ್ದಾರೆ.

ಒಂದೆಡೆ ರಾಜ್ಯದಲ್ಲಿ ಗೃಹಲಕ್ಷ್ಮಿ ಹಣ, ಅನ್ನಭಾಗ್ಯ ಹಣ ಬಂದಿಲ್ಲ ಎಂಬ ಆಕ್ರೋಶವಿದೆ. ಇನ್ನೊಂದೆಡೆ ಯೋಜನೆಗಳಿಗೆ ಅನುದಾನ ಸಿಗುತ್ತಿಲ್ಲ ಎಂಬ ಆಕ್ರೋಶವಿದೆ. ಈ ನಡುವೆ ಶಾಸಕರಿಗಾಗಿ ಸ್ಪೀಕರ್ ಐಷಾರಾಮಿ ಚೇರ್ ತರಿಸಿದ್ದು ಸರಿಯಾ ಎಂದು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಯುಟಿ ಖಾದರ್ ಈ ಎಲ್ಲಾ ಆಕ್ರೋಶಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾವು ವಿಧಾನಸಭೆಗೆ ತರಿಸಿದ ಚೇರ್ ದುಡ್ಡು ಕೊಟ್ಟು ತಂದಿದ್ದಲ್ಲ. ಒಂದು ಕಂಪನಿಯವರು ಡೆಮೋಗೆ ಅಂತ ಕೊಟ್ಟಿದ್ದು. ದುಡ್ಡು ಖರ್ಚಿಲ್ಲದೇ ಶಾಸಕರ ಅನುಕೂಲಕ್ಕೆ ಏನು ಮಾಡಬಹುದೋ ಅದನ್ನು ಮಾಡಿದ್ದೇನಷ್ಟೇ ಎಂದಿದ್ದಾರೆ.

ಇನ್ನು, ಈ ಬಗ್ಗೆ ವಿಪಕ್ಷಗಳು ಟೀಕೆ ಮಾಡುವುದಕ್ಕೆ ಅರ್ಥವಿಲ್ಲ. ಯಾಕೆಂದರೆ ಈ ಚೇರ್ ಕೇವಲ ಆಡಳಿತ ಪಕ್ಷದ ಶಾಸರಿಗಾಗಿ ತರಿಸಿದ್ದಲ್ಲ. ವಿಪಕ್ಷದವರೂ ಉಪಯೋಗಿಸಬಹುದು ಎಂದಿದ್ದಾರೆ.

ಈ ಚೇರ್ ಎಲ್ಲರಿಗೂ ಸಾಕಾಗುತ್ತಿಲ್ಲ ಎಂಬ ಆರೋಪಗಳಿಗೆ ಹಾಸ್ಯಭರಿತವಾಗಿ ಉತ್ತರಿಸಿದ ಯುಟಿ ಖಾದರ್, ಎಲ್ಲರಿಗೂ ಚೇರ್ ತರಿಸಿ ಎಲ್ಲರೂ ನಿದ್ರೆ ಮಾಡುತ್ತಿದ್ದರೆ ಮತ್ತೆ ಕಲಾಪದಲ್ಲಿ ನಾನು ಒಬ್ಬ ಏನು ಮಾಡಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments