ಸದನ ಆರಂಭದಲ್ಲೇ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹೊಗಳಿಕೆಗೆ ಫುಲ್ ನಾಚಿಕೊಂಡ ಸ್ಪೀಕರ್ ಖಾದರ್

Krishnaveni K
ಸೋಮವಾರ, 15 ಜುಲೈ 2024 (13:49 IST)
Photo Credit: Facebook
ಬೆಂಗಳೂರು: ವಿಧಾನ ಮಂಡಲ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸದನದ ಮೊದಲ ದಿನವೇ ಸ್ಪೀಕರ್ ಯುಟಿ ಖಾದರ್ ಕಾರ್ಯನಿರ್ವಹಣೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೊಗಳಿಕೆಗೆ ಫುಲ್ ನಾಚಿಕೊಂಡರು.

ಇಂದು ಸದನದ ಆರಂಭದಲ್ಲೇ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ನಿಲುವಳಿ ಪ್ರಸ್ತುತಪಡಿಸಲಾಯಿತು. ಅದರಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್ ಅಶೋಕ್ ಇತ್ತೀಚೆಗೆ ಅಗಲಿದ ಎಲ್ಲಾ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
 
ಎಲ್ಲಕ್ಕಿಂತ ಗಮನ ಸೆಳೆದಿದ್ದು ಸ್ಪೀಕರ್ ಯುಟಿ ಖಾದರ್ ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೊಗಳಿಕೆ ನೀಡಿದ್ದು. ಸಂತಾಪ ಸೂಚಿಸಲು ಎದ್ದು ನಿಂತ ಡಿಕೆಶಿ, ಮೊದಲು ಸ್ಪೀಕರ್ ಗೆ ಅಭಿನಂದನೆ ಸಲ್ಲಿಸಿದರು. ಸದನದ ಆಸನಗಳಿಗೆ, ದ್ವಾರಕ್ಕೆ ಚಿನ್ನದ ಬಣ್ಣ ಹೊಡೆಸಿದ್ದೀರಿ. ಇದಕ್ಕೆ ನಿಮಗೆ ಅಭಿನಂದನೆ ಮತ್ತು ಎಲ್ಲಾ ಶಾಸಕರ ಪರವಾಗಿ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೊಗಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡಾ ಸ್ಪೀಕರ್ ಕಾರ್ಯನಿರ್ವಹಣೆಗೆ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಅಭಿನಂದನೆ ಸಲ್ಲಿಸಿದಾಗ ನಾಚಿಕೊಂಡ ಯುಟಿ ಖಾದರ್ ನಕ್ಕು ಮಾತು ಮುಂದುವರಿಸಿ ಎಂದು ಕೇಳಿಕೊಂಡರು. ಇತ್ತ ವಿಪಕ್ಷ ನಾಯಕ ಅಶೋಕ್ ಕೂಡಾ ಡಿಕೆಶಿಗೆ ಮೊದಲು ನಿಲುವಳಿ ಮುಗಿಸಿ ಆಮೇಲೆ ಅಭಿನಂದನೆ ಸಲ್ಲಿಸೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments