ಕ್ಷಣಕ್ಕೊಂದು ಮಾತನಾಡುವ ಸುಭಾಷ್ ರಾಠೋಡ ಅವಕಾಶವಾದಿ ರಾಜಕಾರಣಿ-ಉಮೇಶ್ ಜಾಧವ್ ಕಿಡಿ

Webdunia
ಶನಿವಾರ, 30 ಮಾರ್ಚ್ 2019 (13:49 IST)
ಕಲಬುರಗಿ : ಕ್ಷಣಕ್ಕೊಂದು ಮಾತನಾಡುವ ಸುಭಾಷ್ ರಾಠೋಡ ಅವಕಾಶವಾದಿ ರಾಜಕಾರಣಿ ಎಂದು ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಕಿಡಿಕಾರಿದ್ದಾರೆ.


ಸುಭಾಷ್ ರಾಠೋಡ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವುದಾಗಿ ಹೇಳಿದ್ದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸುಭಾಷ್ ರಾಠೋಡ ಇದೀಗ ಖರ್ಗೆ ಪರವಾಗಿ ಮಾತನಾಡುತ್ತಿದ್ದಾರೆ.


ಈ ಬಗ್ಗೆ ಮಾತನಾಡಿದ ಉಮೇಶ್ ಜಾಧವ್, ಮೊನ್ನೆಯವರೆಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುತ್ತೇನೆ, ನನಗೆ ಟಿಕೆಟ್ ಕೊಡಿ ಎಂದು ದುಂಬಾಲು ಬಿದ್ದಿದ್ದ ಸುಭಾಷ್ ರಾಠೋಡ, ನಿನ್ನೆ ಖರ್ಗೆ ಅವರನ್ನು ಸೋಲಿಸಲು ಭೂಮಿಯ ಮೇಲೆ ಯಾರಿಂದಲೂ ಸಾಧ್ಯವಿಲ್ಲ ಎನ್ನತ್ತಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಸೇರಿ ಖರ್ಗೆ ಮೆಚ್ಚಿಸಲು ಯತ್ನಿಸುತ್ತಿದ್ದಾರೆ. ಇವರೊಬ್ಬ ಅವಕಾಶವಾದಿ ರಾಜಕಾರಣಿ ಎಂದು ವ್ಯಂಗ್ಯ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments