ಅಕ್ಟೋಬರ್ 22 ರಿಂದ ಕುಷ್ಠರೋಗ ಪತ್ತೆಗೆ ವಿಶೇಷ ಆಂದೋಲನ

Webdunia
ಬುಧವಾರ, 17 ಅಕ್ಟೋಬರ್ 2018 (13:19 IST)
ಜಿಲ್ಲೆಯಾದ್ಯಂತ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕುಷ್ಠರೋಗ ಪತ್ತೆಗೆ ವಿಶೇಷ ಆಂದೋಲನವನ್ನು ಅಕ್ಟೋಬರ್ 22 ರಿಂದ ನವೆಂಬರ್ 4ರವರೆಗೆ ನಡೆಸುವಂತೆ ಜಿಲ್ಲಾಧಿಕಾರಿಯು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿಯಂತ್ರಣಾ ಕಾರ್ಯಕ್ರಮದ  ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಆರ್. ವೆಂಕಟೇಶಕುಮಾರ ಮಾತನಾಡಿದರು. 
ಈ ವಿಶೇಷ ಆಂದೋಲನದಲ್ಲಿ ಜಿಲ್ಲೆಯ ಒಟ್ಟು 542606 ಮನೆಗಳಿಗೆ ಕುಷ್ಠರೋಗ ಪತ್ತೆ ಹಚ್ಚಲು ತಲಾ ಓರ್ವ ಮಹಿಳಾ ಮತ್ತು ಪುರುಷರನ್ನೊಳಗೊಂಡ 1848 ತಂಡಗಳು ಭೇಟಿ ನೀಡಲಿವೆ. 3422 ತಂಡದಲ್ಲಿ ಸದಸ್ಯರು ಕಾರ್ಯನಿರ್ವಹಿಸಲಿದ್ದು, ಆಂದೋಲನದ ಸಮಗ್ರ ಮೇಲ್ವಿಚಾರಣೆಗೆ 377 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.  ಕುಷ್ಠರೋಗ ಪತ್ತೆ ಗುರುತಿಸುವ ತಂಡವು ನಗರ ಪ್ರದೇಶದಲ್ಲಿ 25 ಮನೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 20 ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದರು.

ಕುಷ್ಠರೋಗ ಪತ್ತೆಗೆ ನಿಯೋಜಿಸಲಾದ ತಂಡದ ಸದಸ್ಯರಿಗೆ   ಆಂದೋಲನ ಉದ್ದೇಶದ ಕುರಿತು ತರಬೇತಿ ನೀಡುವುದು ಹಾಗೂ ಕುಷ್ಠರೋಗದಿಂದ ಬಳಲುತ್ತಿರುವ ರೋಗಿಯನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ  ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಿಗೆ ತೆರಳಿ ಚಿಕಿತ್ಸೆ ಪಡೆಯುವಂತೆ ತಿಳುವಳಿಕೆ ನೀಡಬೇಕು. ಆಂದೋಲನಕ್ಕೆ ಸಿಬ್ಬಂದಿಗಳ ಕೊರತೆಯಾದಲ್ಲಿ ಹೆಚ್ಚುವರಿಯಾಗಿ ಆಶಾ ಕಾರ್ಯಕರ್ತರು, ನರ್ಸಿಂಗ್   ವಿದ್ಯಾರ್ಥಿಗಳು ಹಾಗೂ ಇತರೆ ಕಾಲೇಜಿನ ವಿದ್ಯಾರ್ಥಿಗಳನ್ನು ವಾರದಲ್ಲಿ ಮೂರು ದಿನ ಅವರ ಸೇವೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments