Webdunia - Bharat's app for daily news and videos

Install App

ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13,129 ಅರ್ಜಿಗಳು ಸ್ವೀಕೃತ

Webdunia
ಶುಕ್ರವಾರ, 26 ನವೆಂಬರ್ 2021 (21:54 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ವಿಶೇಷ ನೊಂದಣಿ ಅಭಿಯಾನದಲ್ಲಿ, ಕಳೆದ ಮೂರು ಭಾನುವಾರಗಳಲ್ಲಿ 13,129 ಅರ್ಜಿಗಳು ಸ್ವೀಕೃತವಾಗಿರುತ್ತವೆ.
 
ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 08.11.2021 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 08.12.2021 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅವಕಾಶವನ್ನು ಸಾರ್ವಜನಿಕರಿಗೆ ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ವಿಶೇಷ ನೊಂದಣಿ ಅಭಿಯಾನವನ್ನು ನವೆಂಬರ್ ಮಾಹೆಯ ದಿನಾಂಕ: 7, 14, 21, 28ರ ಭಾನುವಾರಗಳಂದು ಹಮ್ಮಿಕೊಳ್ಳಲಾಗಿರುತ್ತದೆ. ಕಳೆದ 3 ಅಭಿಯಾನಗಳಿಂದ 13,129 ಅರ್ಜಿಗಳು ಸ್ವೀಕೃತವಾಗಿರುತ್ತವೆ. 
 
ಅದರಂತೆ, ದಿನಾಂಕ: 28.11.2021 ಭಾನುವಾರ ವಿಶೇಷ ನೊಂದಣಿ ಅಭಿಯಾನದ ಅಂತಿಮ ದಿನವಾಗಿದ್ದು, ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರಗೆ, ಬಿಬಿಎಂಪಿಯ ಕಂದಾಯ ಅಧಿಕಾರಿಗಳು/ಸಹ ಕಂದಾಯ ಅಧಿಕಾರಿಗಳು/ವಾರ್ಡ್ ಕಛೇರಿಗಳು/ಮತಗಟ್ಟೆಗಳಲ್ಲಿ ಆಯೋಜಿಸಲಾಗಿರುತ್ತದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
 
ಭಾರತ ಚುನಾವಣಾ ಆಯೋಗದ ಆದೇಶ ಸಂಖ್ಯೆ: 23/2021/ERS-(Vol-II), ದಿನಾಂಕ: 27.08.2021 ನಿರ್ದೇಶನದಂತೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2022 ಕಾರ್ಯವು ಪ್ರಗತಿಯಲ್ಲಿದ್ದು, ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬುದು ವಿಶೇಷ ನೊಂದಣಿ ಅಭಿಯಾನದ ಧೈಯೋದ್ದೇಶವಾಗಿದೆ.
 
ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರಿರುವ ಕುರಿತು https://electoralsearch.in ಪರಿಶೀಲಿಸಿಕೊಳ್ಳಬಹುದು ಹಾಗೂ ಹೆಸರು ನೊಂದವಣೆಗೆ https://www.nvsp.in ಮತ್ತು Voter helpline Mobile App ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments