Publish Date: Thu, 11 Jan 2024 (21:12 IST)
Updated Date: Thu, 11 Jan 2024 (20:16 IST)
ಬೆಂಗಳೂರು-ಸಂಕ್ರಾಂತಿ, ಪೊಂಗಲ್ ಹಿನ್ನೆಲೆ ಬೆಂಗಳೂರು - ತಮಿಳುನಾಡು ನಡುವೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಓಡಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ವೆಬ್ಸೈಟ್ ಗೆ ಡಯಲ್ ಮಾಡಿ ಅಥವಾ ತಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.