Webdunia - Bharat's app for daily news and videos

Install App

ಇನ್ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ: ಶ್ರೀನಿವಾಸ ಪ್ರಸಾದ್ ಘೋಷಣೆ

Webdunia
ಗುರುವಾರ, 13 ಏಪ್ರಿಲ್ 2017 (13:49 IST)
ನಂಜನಗೂಡು ಉಪಚುನಾವಣೆಯಲ್ಲಿ  ಸೋಲನುಭವಿಸಿರುವ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಇನ್ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ  ಆದರೆ, ರಾಜಕೀಯ ನಿವೃತ್ತಿ ಪಡೆಯುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯುದ್ದಕ್ಕೂ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಇನ್ನಿತರೆ ಕಾಂಗ್ರೆಸ್ ನಾಯಕರ ವಿರುದ್ಧ ಶ್ರೀನಿವಾಸಪ್ರಸಾದ್ ವಾಗ್ದಾಳಿ ನಡೆಸಿದರು. ಕೊನೆಗಾಲದಲ್ಲಿ ಸಚಿವ ಸ್ಥಾನದಿಂದ ತೆಗೆದು ಸಿದ್ದರಾಮಯ್ಯ ನನ್ನ ಸಚಿವ ಸ್ಥಾನದಿಂದ ತೆಗೆದ ಘಾಸಿ ಉಂಟುಮಾಡಿದರು. ಅದಕ್ಕೇ ಪಕ್ಷ ಬಿಟ್ಟು ಬಂದೆ. ನನ್ನ ಮೇಲೆ ಒಂದು ಚಿಕ್ಕ ಕಳಂಕವಿದ್ದರೆ ತೋರಿಸಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.

ಕೊನೆಯ 3 ದಿನ ಯಾವ ರೀತಿ ಚುನಾವಣೆ ನಡೆಸಿದರು ಎಂಬುದನ್ನ ಸಿಎಂ ಸಿದ್ದರಾಮಯ್ಯ ಬಹಿರಂಗಪಡಿಸಲಿ. 1.25 ಲಕ್ಷ ಜನರಿಗೆ ಹಣ ಹಂಚಿದ್ದಾರೆ. ಸಿಎಂ ಆಪ್ತ ಕೆಂಪಯ್ಯ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.

ಅವತ್ತು ಚಾಮುಂಡೇಶ್ವರಿ ಚುನಾವಣೆಯಲ್ಲಿ ಕೇವಲ 250 ಮತಗಳಿಂದ ಗೆದ್ದಿದ್ದೆ, ಅವತ್ತು ನೀನೂ ಸೋತಿದ್ದರೆ ರಾಜಕೀಯ ಜೀವನ ಅಂತ್ಯವಾಗುತ್ತಿತ್ತು. ಚಾಮುಂಡೇಶ್ವರಿ ಚುನಾವಣೆ ವೇಳೆ ನನ್ನ ಮನೆ ಬಾಗಿಲಿಗೆ ಬಂದದ್ದು ಮರೆತುಬಿಟ್ಟಿರಾ..? ಖರ್ಗೆವರೆಗೆ ನಿಮ್ಮ ರೀತಿ ಮಗನಿಗೆ ಸಚಿವ ಸ್ಥಾನ ಕೊಡಿಸಲು ನಾನು ಪ್ರಯತ್ನ ನಡೆಸಿದ್ನಾ ಎಂದು ವಾಗ್ದಾಳಿ ನಡೆಸಿದ್ದಾರೆ.

 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments