Select Your Language

Notifications

webdunia
webdunia
webdunia
webdunia

ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿಯ ಕುರಿತು ವ್ಯಂಗ್ಯವಾಡಿದ ಶ್ರೀರಾಮುಲು

ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿಯ ಕುರಿತು ವ್ಯಂಗ್ಯವಾಡಿದ ಶ್ರೀರಾಮುಲು
ಚಿತ್ರದುರ್ಗ , ಶನಿವಾರ, 6 ಏಪ್ರಿಲ್ 2019 (10:27 IST)
ಚಿತ್ರದುರ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಕ್ಕೆ ಬಿಜೆಪಿ ಉಪಾಧ್ಯಕ್ಷ ಬಿ.ಶ್ರೀರಾಮುಲು ರಾಹುಲ್ ಗಾಂಧಿಯ ಕುರಿತು ವ್ಯಂಗ್ಯವಾಡಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೇಠಿಯಲ್ಲಿ ರಾಹುಲ್ ಗಾಂಧಿಗೆ ಸೋಲಿನ ಭೀತಿ ಕಾಡುತ್ತಿದೆ. ರಾಹುಲ್ ಗೆ ಹಿಂದೂಗಳ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಮುಸ್ಲಿಂ ಹಾಗೂ ಕ್ರೈಸ್ತರೇ ಹೆಚ್ಚಾಗಿರುವ ದಕ್ಷಿಣಕ್ಕೆ ಪಲಾಯನ ಮಾಡಿದ್ದಾರೆ. ಅವರು ಅಮೇಠಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.


ಇನ್ನು ಐಟಿ ದಾಳಿಗೆ ಕೇಂದ್ರ ಸರ್ಕಾರ ಕಾರಣ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವುದು ಸರಿಯಲ್ಲ. ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ್ ಮನೆ ಮೇಲೆ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪುಲ್ವಾಮಾ ದಾಳಿಯ ಬಗ್ಗೆ ನಿಮ್ಮಣ್ಣ ರೇವಣ್ಣ ಭವಿಷ್ಯ ಹೇಳಿದ್ದರಾ?-ಸಿಎಂ ಗೆ ಶ್ರೀನಿವಾಸಪೂಜಾರಿ ವ್ಯಂಗ್ಯ