Webdunia - Bharat's app for daily news and videos

Install App

ಅಜ್ಞಾತ ಸ್ಥಳದಲ್ಲಿ ನೆಡೆಯುತ್ತಿರುವ ಶ್ರೀಕಿ ವಿಷ್ಣುಭಟ್ ವಿಚಾರಣೆ

Webdunia
ಭಾನುವಾರ, 7 ನವೆಂಬರ್ 2021 (20:56 IST)
ಬೆಂಗಳೂರು : ಫೈವ್ ಸ್ಟಾರ್ ಹೋಟೆಲ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿರುವ ಹ್ಯಾಕರ್ ಬಿಟ್ ಕಾಯಿನ್ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಹಾಗೂ ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ವಿಷ್ಣುಭಟ್ ನನ್ನ ಅರೆಸ್ಟ್ ಮಾಡಿರುವ  ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇಬ್ಬರನ್ನು ಇಟ್ಟು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಗಲಾಟೆಯ ವೇಳೆ ಮಧ್ಯ ಸೇವಿಸಿರೋದು ದೃಢ ಪಟ್ಟಿದ್ದು, ಹ್ಯಾಕರ್ ಶ್ರೀಕೃಷ್ಣ ಮತ್ತು ವಿಷ್ಣು ಭಟ್ ಇಬ್ಬರಿಗೂ ಮಾದಕವಸ್ತು ಸೇವನೆ ಪರೀಕ್ಷೆ ಮಾಡಿಸಲಾಗಿದೆ. ಈ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಹ್ಯಾಕರ್ ಶ್ರೀಕೃಷ್ಣ ಹಾಗೂ ವಿಷ್ಣುಭಟ್‌ ಇಬ್ಬರನ್ನು ಪ್ರತ್ಯೇಕವಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನೆಡೆಸುತ್ತಿದ್ದಾರೆ. ಶ್ರೀಕೃಷ್ಣನನ್ನು ಭೇಟಿಯಾಗಲಿಕ್ಕೆ ವಿಷ್ಣುಭಟ್ ಬಂದಿದ್ದು ಯಾಕೆ ಎಂದು ತನಿಖೆ ನೆಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
 
ಎರಡೂವರೆ ತಿಂಗಳಿಂದ ರಾಯಲ್ ಆರ್ಕೆಡ್ ಹೋಟೆಲ್ ನಲ್ಲಿದ್ದ ಶ್ರೀಕೃಷ್ಣ ಹೋಟೆಲ್ ಬಿಲ್ ಕೂಡ ಜ್ಯುವೆಲ್ಲರ್ಸ್ ನ ಮಾಲೀಕನ ಪುತ್ರ ವಿಷ್ಣುಭಟ್ ಫಂಡಿಂಗ ಮಾಡಿದ್ದಾನೆ ಇದಕ್ಕೆ ಕಾರಣವನ್ನು ತನಿಖೆಯಿಂದ ಕಂಡುಹಿಡಿಯಲು ಪೊಲೀಸರು ಮುಂದಾಗಿದ್ದಾರೆ ಎನ್ನುವ ಮಾಹಿತಿ ದೊರೆತಿದೆ. 
 
ಹಲವು ಆಯಾಮಗಳಲ್ಲಿ ವಿಚಾರಣೆ: 
 
ಶ್ರೀಕೃಷ್ಣ ತಂಗಿದ್ದ ಹೋಟೆಲ್ ರೂಂ ತಪಾಸಣೆ ನಡೆಸಿದ್ದ ಪೊಲೀಸರು ನಾಲ್ಕು ಲ್ಯಾಪ್ ಟ್ಯಾಪ್ ವಶಕ್ಕೆ ಪಡೆದಿದ್ದಾರೆ. ಶ್ರೀಕಿ ಈ ಹಿಂದೆ ಸಿಸಿಬಿಯಿಂದ ಅರೆಸ್ಟ್ಆದಾಗ ಹಲವು ಸ್ಫೋಟಕ ವಿಚಾರಗಳು ಹೊರಬಂದಿದ್ದವು. ಈಗಲೂ ಸಹ ಹಲವು ದೃಷ್ಟಿಕೋನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
 
ಬಿಟ್ ಕಾಯಿನ್ ಹಾಗೂ ಡಾರ್ಕ್ ವೆಬ್ ಸೈಟ್ ಬಳಸುವ ಕುರಿತು ಶ್ರೀಕಿ ಮಾಸ್ಟರ್ ಮೈಂಡ್ ಆಗಿದ್ದರಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮತ್ತೆ ಹ್ಯಾಕ್ ಮಾಡುತ್ತಿದ್ದನಾ ಅಥವಾ ಬಿಟ್ ಕಾಯಿನ್ ಹಗರಣ ನೆಡೆಸುತ್ತಿದ್ದಾನಾ ಎನ್ನುವುದರ ಕುರಿತು ಸಮಗ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
 
ನಂಟುಹೊಂದಿರುವ ರಾಜಕಾರಣಿಗಳ  ಮಕ್ಕಳಿಗೆ ಕಂಟಕ: 
 
ಇತ್ತ ಶ್ರೀಕಿ ಅರೆಸ್ಟ್ ಆಗುತ್ತಿದ್ದಂತೆ ಈತನ ನಂಟು ಹೊಂದಿದ್ದ ಹತ್ತು ಹಲವಾರು ಜನರಿಗೆ ನಡುಕ ಆರಂಭವಾಗಿದೆ. ಅನೇಕ ರಾಜಕಾರಣಿಗಳ ಮಕ್ಕಳು, ವ್ಯಾಪಾರಸ್ಥರ ಮಕ್ಕಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಈತ ಯಾರ ಜತೆ ಯಾವ ವ್ಯವಹಾರ ನಡೆಸಿದ್ದಾನೆ ಎನ್ನುವುದರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಾಗುತ್ತಿದೆ.
 
ಎರಡೂವರೆ ತಿಂಗಳಿನಿಂದ ರಾಯಲ್ ಆರ್ಕೆಡ್ ಹೋಟೆಲ್ ನಲ್ಲಿ  ಶ್ರೀಕಿ:  
 
ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಕಳೆದ ಎರಡೂವರೆ ತಿಂಗಳಿನಿಂದ ಶ್ರೀಕಿ ರಾಯಲ್ ಆರ್ಕೆಡ್ ಹೋಟೆಲ್ ನಲ್ಲಿ ತಂಗಿದ್ದ. ಶ್ರೀಕೃಷ್ಣನ ಭೇಟಿಗಾಗಿ ಶನಿವಾರ ಭೀಮಾ ಜ್ಯುವೆಲ್ಲರ್ಸ್ ನ ವಿಷ್ಣು ಭಟ್ ಬಂದಿದ್ದ. ಈ ವೇಳೆ ಹೋಟೆಲ್ ನಲ್ಲಿದ್ದ ಡ್ಯೂಟಿ ಮ್ಯಾನೇಜರ್ ಮೇಲೆ ವಿಷ್ಣುಭಟ್ ಹಾಗೂ ಶ್ರೀಕಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಜೀವನ ಭೀಮಾನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 348,323 ರ ಅಡಿ ಎಫ್.ಐ.ಆರ್ ದಾಖಲಾಗಿದೆ.
sriki

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments