Webdunia - Bharat's app for daily news and videos

Install App

ಶ್ರೀಲಂಕಾದ ಮೋಸ್ಟ್ ವಾಂಟೆಡ್ ಆರೋಪಿಗಳಿಗೆ ಹಣ ಸಹಾಯ ಇಬ್ಬರ ಅರೆಸ್ಟ್

Webdunia
ಶನಿವಾರ, 26 ಆಗಸ್ಟ್ 2023 (16:46 IST)
ಶ್ರೀಲಂಕಾದ ಪಾತಕಿಗಳಿಗೆ ಹಣದ ನೆರವು ನೀಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಚೆನೈ ಮೂಲದ ಮನ್ಸೂರ್ ಮತ್ತು ಬೆಂಗಳೂರಿನ ವಿವೇಕ ನಗರದ ಅನ್ಬು ಬಂಧಿತ ಆರೋಪಿಗಳು. ಮನ್ಸೂರ್ ಬಳಿ  57 ಲಕ್ಷ ನಗದು,1.5 ಕೋಟಿ ಡಿ.ಡಿ ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚವೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ ಬೆಂಗಳೂರಿನಿಂದ ಇತರೆಡೆಗೆ ತೆರಳಲು ಆರೋಪಿಗಳು ಸಿದ್ಧರಾಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
 
ಆರೋಪಿಗಳು ಸಮುದ್ರ ಮಾರ್ಗ ಬಳಸಿ ಬೆಂಗಳೂರಿಗೆ ಬರಲು ನೆರವಾಗಿದ್ದ ಜಲಾಲ್ ನ ಮಾರ್ಗದರ್ಶನದಂತೆ ಮನ್ಸೂರ್ ಕೆಲಸ ನಿರ್ವಹಿಸುತ್ತಿದ್ದ. ಒಮಾನ್ ನಲ್ಲಿದ್ದ ಜಲಾಲ್, ಬೆಂಗಳೂರಿನಲ್ಲಿರುವ ಆರೋಪಿಗಳಿಗೆ 50 ಲಕ್ಷ ರೂ ನೀಡುವಂತೆ ಮನ್ಸೂರ್ ಗೆ ಸೂಚಿಸಿದ್ದ. ಅದರಂತೆ ಬೆಂಗಳೂರಿಗೆ ಬಂದಿಳಿದಿದ್ದ ಶ್ರೀಲಂಕಾ ಮೂಲದ ಆರೋಪಿಗಳಿಗೆ ಹಣ ನೀಡಲು ಮನ್ಸೂರ್ ಸಿದ್ಧವಾಗಿದ್ದ. ಇತ್ತ ಅನ್ಬು ಬೆಂಗಳೂರಿನಲ್ಲಿ ಪಾಸ್‌ಪೋರ್ಟ್ ಸಿದ್ಧಪಡಿಸಿ ಕೊಡುವ ಕೆಲಸಕ್ಕೆ ನಿಯೋಜನೆಯಾಗಿದ್ದ.ಅದಕ್ಕೆ ಬೇಕಾದ ದಾಖಲೆಗಳನ್ನ ಸಿದ್ಧಪಡಿಸುತ್ತಿದ್ದ ಆತನನ್ನ ಬಂಧಿಸಲಾಗಿದೆ.
 
ಹಣ ಪಡೆದು ನೇಪಾಳದಲ್ಲಿರುವ ಸಂಜೀವ್ ಎಂಬಾತನ ಜೊತೆ ಸೇರಿಕೊಳ್ಳಲು ಆರೋಪಿಗಳು ಸಿದ್ಧವಾಗಿದ್ದರು. ಸಂಜೀವ್ ಜೊತೆ ಆರೋಪಿಗಳು ಸಿಂಹಳೀಯ ಭಾಷೆಯಲ್ಲಿ ನಡೆಸಿರುವ ಮೊಬೈಲ್ ಸಂಭಾಷಣೆ ಸಹ ಪತ್ತೆಯಾಗಿದೆ ಮತ್ತು ಬಂಧಿತರಿಗೆ ಸಿಂಹಳೀಯ ಭಾಷೆ ಮಾತ್ರವೇ ತಿಳಿದಿದೆ. ಆದ್ದರಿಂದ ಭಾಷಾಂತರಿಸುವವರ ನೆರವು ಪಡೆಯಲಾಗುತ್ತಿದೆ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಶ್ರೀಲಂಕಾದಲ್ಲಿ ಕೊಲೆ, ಗ್ಯಾಂಗ್ ವಾರ್ ನಂತಹ ಕೃತ್ಯಗಳಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಬಂದು ಅಕ್ರಮವಾಗಿ ನೆಲೆಸಿದ್ದ ಕಸನ್ ಕುಮಾರ್ ಸಂಕ (36), ಅಮಿಲಾ ನುವಾನ್ ಅಲಿಯಾಸ್ ಗೋತಾ ಸಿಲ್ವಾ (36) ರಂಗಪ್ರಸಾದ್ ಅಲಿಯಾಸ್ ಚುಟ್ಟಾ (36) ಹಾಗೂ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಆಶ್ರಯ ನೀಡಿದ್ದ ಜೈ ಪರಮೇಶ್ (42) ಎಂಬಾತನನ್ನ ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments