Webdunia - Bharat's app for daily news and videos

Install App

ಶ್ರೀಲಂಕಾದ ಮೋಸ್ಟ್ ವಾಂಟೆಡ್ ಆರೋಪಿಗಳಿಗೆ ಹಣ ಸಹಾಯ ಇಬ್ಬರ ಅರೆಸ್ಟ್

Webdunia
ಶನಿವಾರ, 26 ಆಗಸ್ಟ್ 2023 (16:46 IST)
ಶ್ರೀಲಂಕಾದ ಪಾತಕಿಗಳಿಗೆ ಹಣದ ನೆರವು ನೀಡುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಚೆನೈ ಮೂಲದ ಮನ್ಸೂರ್ ಮತ್ತು ಬೆಂಗಳೂರಿನ ವಿವೇಕ ನಗರದ ಅನ್ಬು ಬಂಧಿತ ಆರೋಪಿಗಳು. ಮನ್ಸೂರ್ ಬಳಿ  57 ಲಕ್ಷ ನಗದು,1.5 ಕೋಟಿ ಡಿ.ಡಿ ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚವೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ ಬೆಂಗಳೂರಿನಿಂದ ಇತರೆಡೆಗೆ ತೆರಳಲು ಆರೋಪಿಗಳು ಸಿದ್ಧರಾಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
 
ಆರೋಪಿಗಳು ಸಮುದ್ರ ಮಾರ್ಗ ಬಳಸಿ ಬೆಂಗಳೂರಿಗೆ ಬರಲು ನೆರವಾಗಿದ್ದ ಜಲಾಲ್ ನ ಮಾರ್ಗದರ್ಶನದಂತೆ ಮನ್ಸೂರ್ ಕೆಲಸ ನಿರ್ವಹಿಸುತ್ತಿದ್ದ. ಒಮಾನ್ ನಲ್ಲಿದ್ದ ಜಲಾಲ್, ಬೆಂಗಳೂರಿನಲ್ಲಿರುವ ಆರೋಪಿಗಳಿಗೆ 50 ಲಕ್ಷ ರೂ ನೀಡುವಂತೆ ಮನ್ಸೂರ್ ಗೆ ಸೂಚಿಸಿದ್ದ. ಅದರಂತೆ ಬೆಂಗಳೂರಿಗೆ ಬಂದಿಳಿದಿದ್ದ ಶ್ರೀಲಂಕಾ ಮೂಲದ ಆರೋಪಿಗಳಿಗೆ ಹಣ ನೀಡಲು ಮನ್ಸೂರ್ ಸಿದ್ಧವಾಗಿದ್ದ. ಇತ್ತ ಅನ್ಬು ಬೆಂಗಳೂರಿನಲ್ಲಿ ಪಾಸ್‌ಪೋರ್ಟ್ ಸಿದ್ಧಪಡಿಸಿ ಕೊಡುವ ಕೆಲಸಕ್ಕೆ ನಿಯೋಜನೆಯಾಗಿದ್ದ.ಅದಕ್ಕೆ ಬೇಕಾದ ದಾಖಲೆಗಳನ್ನ ಸಿದ್ಧಪಡಿಸುತ್ತಿದ್ದ ಆತನನ್ನ ಬಂಧಿಸಲಾಗಿದೆ.
 
ಹಣ ಪಡೆದು ನೇಪಾಳದಲ್ಲಿರುವ ಸಂಜೀವ್ ಎಂಬಾತನ ಜೊತೆ ಸೇರಿಕೊಳ್ಳಲು ಆರೋಪಿಗಳು ಸಿದ್ಧವಾಗಿದ್ದರು. ಸಂಜೀವ್ ಜೊತೆ ಆರೋಪಿಗಳು ಸಿಂಹಳೀಯ ಭಾಷೆಯಲ್ಲಿ ನಡೆಸಿರುವ ಮೊಬೈಲ್ ಸಂಭಾಷಣೆ ಸಹ ಪತ್ತೆಯಾಗಿದೆ ಮತ್ತು ಬಂಧಿತರಿಗೆ ಸಿಂಹಳೀಯ ಭಾಷೆ ಮಾತ್ರವೇ ತಿಳಿದಿದೆ. ಆದ್ದರಿಂದ ಭಾಷಾಂತರಿಸುವವರ ನೆರವು ಪಡೆಯಲಾಗುತ್ತಿದೆ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಶ್ರೀಲಂಕಾದಲ್ಲಿ ಕೊಲೆ, ಗ್ಯಾಂಗ್ ವಾರ್ ನಂತಹ ಕೃತ್ಯಗಳಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಬಂದು ಅಕ್ರಮವಾಗಿ ನೆಲೆಸಿದ್ದ ಕಸನ್ ಕುಮಾರ್ ಸಂಕ (36), ಅಮಿಲಾ ನುವಾನ್ ಅಲಿಯಾಸ್ ಗೋತಾ ಸಿಲ್ವಾ (36) ರಂಗಪ್ರಸಾದ್ ಅಲಿಯಾಸ್ ಚುಟ್ಟಾ (36) ಹಾಗೂ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಆಶ್ರಯ ನೀಡಿದ್ದ ಜೈ ಪರಮೇಶ್ (42) ಎಂಬಾತನನ್ನ ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments