ನಾಯಕತ್ವ ಮುಗಿದ ಅಧ್ಯಾಯ: ಶ್ರೀನಿವಾಸ್ ಪ್ರಸಾದ್

Webdunia
ಭಾನುವಾರ, 4 ಜುಲೈ 2021 (20:05 IST)
ಮೈಸೂರಿನ ತಮ್ಮ ನಿವಾಸಕ್ಕೆ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ರಾಜಕಾರಣಿ ಎಂಬ ಗೌರವದಿಂದ ನನ್ನನ್ನು ಭೇಟಿ ಮಾಡಲು ಬಂದಿದ್ದರೆ ಹೊರತು ಯಾವುದೇ ರಾಜಕೀಯ ಚರ್ಚೆಗಳು ಆಗಿಲ್ಲ. ಅವರಿಗೆ ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತಿಳಿಸಿದ್ದಾರೆ. ಹೈಕಮಾಂಡ್ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುವುದೋ ನೋಡಬೇಕು. ಯಡಿಯೂರಪ್ಪ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ದನಿದ್ದೇನೆ ಎಂರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಗೆ ನಾವು ಹೊಸಬರು, ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪನವರ ಅಪಾರ ಶ್ರಮವಿದೆ. ನಾವು ಬಿಜೆಪಿಗೆ ಬಂದಿದ್ದರಿಂದ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ. ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗಿದೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ 3 ಲಕ್ಷ ಅಂತರದಿಂದ ಗೆಲ್ಲುವ ಸಾಮರ್ಥ್ಯವಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ವಲಸಿಗರ ಪರ ಬ್ಯಾಟ್ ಬೀಸಿದರು.
ರಮೇಶ್ ಜಾರಕಿಹೊಳಿ ಪ್ರಕರಣ ಎಸ್.ಐ.ಟಿ ಮುಂದೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ನಂತರ ಅವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಕ್ಷಕನ ಮನವಿಗೆ ಲಂಚಕ್ಕೆ ಬೇಡಿಕೆಯಿಟ್ಟ ಶಿಕ್ಷಣಾಧಿಕಾರಿ ರೆಡ್‌ ಹ್ಯಾಂಡ್ ಆಗಿ ಲಾಕ್‌

ಪವಿತ್ರ ರಂಜಾನ್ ತಿಂಗಳಲ್ಲಿ ಇರಾನ್, ಗಲ್ಫ್‌ ಸಂಘರ್ಷಕ್ಕೆ ಭಾರತ ಕಳವಳ

ಯುಎಸ್‌, ಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ ಸಾವನ್ನಪ್ಪಿದ 160 ವಿದ್ಯಾರ್ಥಿಗಳಿಗೆ ಸಾಮೂಹಿಕ ಅಂತ್ಯಕ್ರಿಯೆ, ಫೋಟೋ

ಎಲ್ಲಿಯೋ ಸತ್ತ ಕ್ರೂರಿಗೆ ನಮ್ಮ ದೇಶದ ಅನ್ನ ತಿಂದು ಇಲ್ಲಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಮುಂದಿನ ಸುದ್ದಿ
Show comments