Webdunia - Bharat's app for daily news and videos

Install App

ನಾಯಕತ್ವ ಮುಗಿದ ಅಧ್ಯಾಯ: ಶ್ರೀನಿವಾಸ್ ಪ್ರಸಾದ್

Webdunia
ಭಾನುವಾರ, 4 ಜುಲೈ 2021 (20:05 IST)
ಮೈಸೂರಿನ ತಮ್ಮ ನಿವಾಸಕ್ಕೆ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ರಾಜಕಾರಣಿ ಎಂಬ ಗೌರವದಿಂದ ನನ್ನನ್ನು ಭೇಟಿ ಮಾಡಲು ಬಂದಿದ್ದರೆ ಹೊರತು ಯಾವುದೇ ರಾಜಕೀಯ ಚರ್ಚೆಗಳು ಆಗಿಲ್ಲ. ಅವರಿಗೆ ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತಿಳಿಸಿದ್ದಾರೆ. ಹೈಕಮಾಂಡ್ ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುವುದೋ ನೋಡಬೇಕು. ಯಡಿಯೂರಪ್ಪ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ದನಿದ್ದೇನೆ ಎಂರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಗೆ ನಾವು ಹೊಸಬರು, ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪನವರ ಅಪಾರ ಶ್ರಮವಿದೆ. ನಾವು ಬಿಜೆಪಿಗೆ ಬಂದಿದ್ದರಿಂದ ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ. ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗಿದೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ 3 ಲಕ್ಷ ಅಂತರದಿಂದ ಗೆಲ್ಲುವ ಸಾಮರ್ಥ್ಯವಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಶ್ರೀನಿವಾಸ್ ಪ್ರಸಾದ್ ಪರೋಕ್ಷವಾಗಿ ವಲಸಿಗರ ಪರ ಬ್ಯಾಟ್ ಬೀಸಿದರು.
ರಮೇಶ್ ಜಾರಕಿಹೊಳಿ ಪ್ರಕರಣ ಎಸ್.ಐ.ಟಿ ಮುಂದೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ನಂತರ ಅವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments