ಅನಂತ್‌ಕುಮಾರ್ ಹೆಗಡೆ ಮತಾಂಧ, ಮಹಾಮೂರ್ಖ: ಬಿಜೆಪಿ ಮುಖಂಡ

Webdunia
ಶನಿವಾರ, 30 ಡಿಸೆಂಬರ್ 2017 (16:06 IST)
ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆಪಿ ನಾಯಕ ಮಧುಸೂಧನ ಮತಾಂಧರು ಮತ್ತು ಮಹಾನ್ ಮೂರ್ಖರು ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಇಂದು ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಹೆಗಡೆ ಮತ್ತು ಮಧುಸೂಧನ್ ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿ ಪ್ರಧಾನಿ ಮೋದಿ ಸರಕಾರಕ್ಕೆ ಅಪಮಾನ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದ ಹೈಕಮಾಂಡ್ ಕೂಡಲೇ ಇಬ್ಬರಿಗೆ ಕಠಿಣ ಎಚ್ಚರಿಕೆ ನೀಡಬೇಕು, ಮತ್ತೆ ಆದೇ ರೀತಿ ಮುಂದುವರಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 
ದೇಶದಲ್ಲಿ ಸಂವಿಧಾನವಿರುವುದರಿಂದಲೇ ಚಹಾ ಮಾರುತ್ತಿದ್ದ ನಾನು ಪ್ರಧಾನಮಂತ್ರಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. ಸಂವಿಧಾನ ಪವಿತ್ರ ಪುಸ್ತಕ ಎಂದು ಬಣ್ಣಿಸಿದ್ದಾರೆ. ಆದರೆ, ಐದು ಬಾರಿ ಸಂಸದರಾಗಿರುವ ಹೆಗಡೆ ಸಂವಿಧಾನವನ್ನು ಅರ್ಥ ಮಾಡಿಕೊಳ್ಳದಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
 
ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆಯವರಿಗೆ ಸಂವಿಧಾನ ಮತ್ತು ಜಾತ್ಯಾತೀತೆಯ ಬಗ್ಗೆ ಕನಿಷ್ಠ ಜ್ಞಾನವಾದರೂ ಇರಬೇಕಾಗಿತ್ತು. ಹೆಗಡೆ ಹೇಳಿಕೆ ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿರುವುದು ನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.
 
ಮಾಜಿ ವಿಧಾನಪರಿಷತ್ ಸದಸ್ಯ ಮಧುಸೂಧನ್, ಸಚಿವ ಹೆಗಡೆ ಹೇಳಿಕೆಯನ್ನು ಬೆಂಬಲಿಸಿ ಅನಗತ್ಯವಾಗಿ ಮನಬಂದಂತೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments