Select Your Language

Notifications

webdunia
webdunia
webdunia
webdunia

ನಂಜನಗೂಡಿನ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ: ಶ್ರೀನಿವಾಸ್ ಪ್ರಸಾದ್ ಪ್ರತಿಜ್ಞೆ

ನಂಜನಗೂಡಿನ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ: ಶ್ರೀನಿವಾಸ್ ಪ್ರಸಾದ್ ಪ್ರತಿಜ್ಞೆ
ಮೈಸೂರು , ಬುಧವಾರ, 15 ನವೆಂಬರ್ 2017 (18:45 IST)
ನಂಜನಗೂಡು ಉಪಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ಸೋಲಿನ ಸೇಡು ತೀರಿಸಿಕೊಂಡು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮಹಾದೇವಪ್ಪಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಯಾವುದೇ ಕಾರಣಕ್ಕೂ ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಿಗೆ ಯಾರೇ ಬಿಜೆಪಿ ಅಭ್ಯರ್ಥಿಯಾದರೂ ನಂಜನಗೂಡು, ವರುಣ ಕ್ಷೇತ್ರ, ಟೀ ನರಸೀಪುರ, ಕ್ಷೇತ್ರಗಳಲ್ಲಿ ಗೆಲುವಿಗೆ ಸಹಕರಿಸುತ್ತೇನೆ ಎಂದರು.
 
ಕಾಂಗ್ರೆಸ್ ಪಕ್ಷವನ್ನು ಈ ಮೂರು ಕ್ಷೇತ್ರಗಳಲ್ಲಿ ಸೋಲಿಸುವ ಮೂಲಕ ಸೇಡು ತೀರಿಸಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ ಸೋಲೇ ನನ್ನ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಜಾಹೀರಾತಿನಲ್ಲಿ "ಪಪ್ಪು" ಪದ ಬಳಕೆಗೆ ಚು.ಆಯೋಗ ನಿಷೇಧ