Webdunia - Bharat's app for daily news and videos

Install App

ಧ್ವನಿ ಎತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಇನ್ಸ್ಟಾಗ್ರಾಮ್ನಲ್ಲಿ ಕೊಲೆ ಬೆದರಿಕೆ

Webdunia
ಶುಕ್ರವಾರ, 10 ಜೂನ್ 2022 (19:41 IST)
ಮೈಕ್, ಹಿಜಾಬ್ ಹಾಗೂ ಮಸೀದಿ ವಿಚಾರವಾಗಿ ಧ್ವನಿ ಎತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಗೆ  ಇನ್ಸ್ಟಾಗ್ರಾಮ್ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ವಿಚಾರವಾಗಿ ಮುತಾಲಿಕ್ ಅವರು ಈಗ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಉಡುಪಿಯ ಇನ್ಸ್ಟಾಗ್ರಾಮ್ ನ ಮಾರಿಗುಡಿ ಎಂಬ ಪೇಜ್ನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಅಲ್ಲದೇ ಅವರ ತಲೆ ಕಡಿದ್ರೆ 10 ಲಕ್ಷ ಬಹುಮಾನ ಕೊಡುವ ಮಾತನ್ನ ಉಲ್ಲೇಖ ಮಾಡಿದ್ದರು. ಈ ಪೇಜನ್ನ 60 ಜನ ಲೈಕ್ ಕೂಡಾ ಮಾಡಿದ್ರೆ, ಹಲವರು ಕಮೇಂಟ್ ಕೂಡಾ ಮಾಡಿದ್ರು. ಈ ವಿಚಾರವಾಗಿ ಪ್ರಮೋದ್ ಮುತಾಲಿಕ್  ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲು ಏರಿದ್ದಾರೆ. ಧಮ್ಕಿ ವಿಚಾರವಾಗಿ ಪೊಲೀಸ್ ಆಯುಕ್ತ ಲಾಬುರಾಮ್ ಜೊತೆ ಚರ್ಚೆ ನಡೆಸಿ ಮುತಾಲಿಕ್, ಆರೋಪಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಮೂರು ನಂಬರ್ಗಳಿಂದ ಕೊಲೆ ಬೆದರಿಕೆ ಕರೆಗಳು ಕೂಡಾ ಬರುತ್ತಿವೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿರುವ ಮುತಾಲಿಕ್, ಈ ಬೆದರಿಕೆಗೆ ಹೆದರಿ ಯಾವುದೇ ಹೋರಾಟದಿಂದ ಹಿಂದೆ ಸರಿಯಲ್ಲ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments