ಡಿಕೆ ಶಿವಕುಮಾರ್ ರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ ಶ್ರೀರಾಮುಲು

Webdunia
ಮಂಗಳವಾರ, 3 ಸೆಪ್ಟಂಬರ್ 2019 (13:43 IST)
ಬೆಂಗಳೂರು : ಡಿಕೆಶಿವಕುಮಾರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದ ಹಿನ್ನಲೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿಕೆ ನೀಡಿದ ಸಚಿವ ಶ್ರೀರಾಮುಲು ಇದೀಗ ಡಿಕೆಶಿ ಕ್ಷಮೆ ಯಾಚಿಸಿದ್ದಾರೆ.




ನಿನ್ನೆ ಇಡಿ ವಿಚಾರಣೆಗೆ ಹಾಜರಾಗುತ್ತಿರುವ ಡಿಕೆಶಿವಕುಮಾರ್ ಭಾವುಕರಾಗಿ, ನನ್ನ ಮಿತ್ರರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ. ನಾನು ಉಪ್ಪು ತಿಂದರೆ ನೀರು ಕುಡಿಯಲು ಸಿದ್ಧ ಎಂದು ಕಣ್ಣೀರು ಹಾಕಿದ್ದರು.


ಈ ಹಿನ್ನಲೆಯಲ್ಲಿ ಮನನೊಂದ ಶ್ರೀರಾಮುಲು ಇದೀಗ ಡಿಕೆಶಿ ಕ್ಷಮೆ ಯಾಚಿಸಿದ್ದಾರೆ. ನನ್ನ ಮಾತಿನಿಂದ ನೋವಾಗಿದ್ದರೆ ಡಿಕೆಶಿ ಅವರಿಗೆ ಬಹಿರಂಗವಾಗಿ ಕ್ಷಮೆಯಾಗಿಸುತ್ತೇನೆ. ಅವರು ಕಣ್ಣೀರು ಹಾಕಬೇಕು ಅನ್ನೋ ಉದ್ದೇಶದಿಂದ ನಾನು ಮಾತನಾಡಿಲ್ಲ. ನನ್ನ ಭಾಷೆ ರಾಜಕಾರಣಕ್ಕೆ ಸೀಮಿತವೇ ಹೊರತು ವೈಯಕ್ತಿಕ ಅಲ್ಲ, ಇವತ್ತು ಅವ್ರು ಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಮಾತಾಡಿದ್ರೆ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನೋವಾಗಬಹುದು ಎಂದು ಹೇಳಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಕೆಲವು ಸಂದರ್ಭದಲ್ಲಿ ತಪ್ಪಾಗಿ ಮಾತನಾಡಿರಬಹುದು, ಶ್ರೀರಾಮುಲು ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments