Select Your Language

Notifications

webdunia
webdunia
webdunia
webdunia

ಬಿಎಸ್ ವೈ ಎದುರು ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು. ಕಾರಣವೇನು ಗೊತ್ತಾ?

ಬಿಎಸ್ ವೈ ಎದುರು ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು. ಕಾರಣವೇನು ಗೊತ್ತಾ?
ಬೆಂಗಳೂರು , ಮಂಗಳವಾರ, 27 ಆಗಸ್ಟ್ 2019 (14:12 IST)
ಬೆಂಗಳೂರು : ಸಿಎಂ ಯಡಿಯುರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಇದೀಗ ಈ ಬಗ್ಗೆ ಕೆಲವರು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಆರೋಗ್ಯ ಇಲಾಖೆ ಕೊಟ್ಟಿದ್ದಕ್ಕೆ ಬಿ. ಶ್ರೀರಾಮುಲು ಸಿಎಂ ಯಡಿಯೂರಪ್ಪ ಅವರ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದು, ಆರೋಗ್ಯ ಖಾತೆ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಖಾತೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈಗಾಗಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶ್ರೀರಾಮುಲು, ಪಕ್ಷಕ್ಕಾಗಿ ನಾನು ಡಿಸಿಎಂ ಹುದ್ದೆಯನ್ನೇ ಬೇಡವೆಂದು ಹೇಳಿದ್ದೆ. ಕೊನೆಪಕ್ಷ ನೀವು ದೊಡ್ಡ ಖಾತೆ ಕೊಡುತ್ತೀರಿ ಎಂದು ಭಾವಿಸಿದ್ದೆ. ಆದರೆ, ಹೀಗೆ ಮಾಡಿರುವುದರಿಂದ ನನಗೆ ಬೇಸರವಾಗಿದೆ ಎಂದು ಶ್ರೀರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ ಬಿಎಸ್ ವೈ