Select Your Language

Notifications

webdunia
webdunia
webdunia
webdunia

ಸಚಿವ ಡಿಕೆಶಿಗೆ ತಿರುಗೇಟು ನೀಡಿದ ಶ್ರೀರಾಮುಲು

ಸಚಿವ ಡಿಕೆಶಿಗೆ ತಿರುಗೇಟು ನೀಡಿದ ಶ್ರೀರಾಮುಲು
ಚಿತ್ರದುರ್ಗ , ಸೋಮವಾರ, 24 ಜೂನ್ 2019 (16:07 IST)
ಬಿಜೆಪಿಯ ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ನ ಸಚಿವ ಡಿ.ಕೆ.ಶಿವಕುಮಾರ ನಡುವೆ ಆರೋಪ- ಪ್ರತ್ಯಾರೋಪಗಳು ಮುಂದುವರಿದಿವೆ.

ಚಿತ್ರದುರ್ಗದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು.
ಸೋಲಿನ ಭಯದಿಂದ  ಅಮೇಥಿ ಲೋಕಸಭೆ ಕ್ಷೇತ್ರವನ್ನು ಬಿಟ್ಟು ವಯನಾಡಿಗೆ ಬಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾಯಿತರಾಗಿದ್ದಾರೆ. ಹಾಗಾದ್ರೆ ಅಮೇಥಿ ಲೋಕಸಭೆ ಕ್ಷೇತ್ರದ ಜತೆಗೆ ರಾಹುಲ್ ಸಂಬಂಧ ಮುಗಿದು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನೆಮಾಡಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರವನ್ನು ಬಿಟ್ಟು  ಬಾದಾಮಿಯಲ್ಲಿ ಚುನಾವಣೆಯಲ್ಲಿ ಗೆದ್ದರು. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಶ್ರೀರಾಮುಲು ಹರಿಹಾಯ್ದರು.

ಡಿ.ಕೆ.ಶಿವಕುಮಾರ್ ಮೊದಲು ಅವರ ಪಾರ್ಟಿಯವರಿಗೆ ಪ್ರಶ್ನೆ ಕೇಳಲಿ. ನಂತ್ರ ಬಂದು ಶ್ರೀರಾಮುಲುಗೆ ಪ್ರಶ್ನೆ ಕೇಳಲಿ ಎಂದು ಟಾಂಗ್ ನೀಡಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯ ಕಾರ್ಯದರ್ಶಿಯಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ?