Webdunia - Bharat's app for daily news and videos

Install App

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ: ಪೂಜೆಗೆ ಅವಕಾಶ ಕೋರಿ ಡಿಸಿಗೆ ಮನವಿ!

Webdunia
ಭಾನುವಾರ, 15 ಮೇ 2022 (07:20 IST)
ಮಂಡ್ಯ : ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ರೀತಿ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ಪರಿಶೀಲನೆ ನಡೆಸಬೇಕು. ಹಿಂದೂ ದೇವಾಲಯದ ಕುರುಹುಗಳಿರುವ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಬೇಕು ಎಂದು ನರೇಂದ್ರ ವಿಚಾರ ಮಂಚ್ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
 
ಜಿಲ್ಲಾಧಿಕಾರಿ ಎಸ್ ಅಶ್ವಥಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಹಿಂದೂ ಕಾರ್ಯಕರ್ತರು. ಮಸೀದಿ ಕುರಿತು ಒಂದಷ್ಟು ಅಂಶಗಳನ್ನ ಉಲ್ಲೇಖಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟದ ಜಾಮಿಯಾ ಮಸೀದಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ ಆರೋಪಿಸಿರುವ ಅವರು. ಟಿಪ್ಪು ಸುಲ್ತಾನ್ ಆಡಳಿತ ಅವಧಿಯಲ್ಲಿ ದೇವಾಲಯ ಕೆಡವಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ದೇವಾಲಯದ ಕುರುಹುಗಳು ಅಲ್ಲಿ ಈಗಲೂ ಇದೆ. ಕೊಳ, ದೇವರ ಕೆತ್ತನಗಳು ಕಣ್ಣಿಗೆ ಕಾಣಿಸುತ್ತದೆ. ಹೀಗಾಗಿ ಮಸೀದಿಯನ್ನು ತೆರವುಗೊಳಿಸಿ ಮತ್ತೆ ಮೂಡಲಬಾಗಿಲು ಆಂಜನೇಯ ಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
 
1784ರಲ್ಲಿ ಟಿಪ್ಪು ಸುಲ್ತಾನ್ ಅವಧಿಯಲ್ಲಿ ಜಾಮಿಯಾ ಮಸೀದಿ ನಿರ್ಮಾಣವಾಗಿದೆ. ಆದರೆ ಅದಕ್ಕೂ ಮೊದಲು ಆ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನವಿತ್ತು ಎಂಬ ವಾದವಿದೆ. ಜಾಮಿಯಾ ಮಸೀದಿಯ ಒಳ ಭಾಗದಲ್ಲಿ ಹಿಂದೂ ದೇವಸ್ಥಾನಗಳಲ್ಲಿರುವ ರೀತಿ ಕಲ್ಯಾಣಿ, ಬಾವಿಗಳು ಇವೆ. ಮಸೀದಿಯ ಮಿನಾರ್‌‌ಗಳ ಮೇಲೆ ಕಳಸಗಳನ್ನ ಇಡಲಾಗಿದೆ. ಸುತ್ತಲೂ ಇರುವ ಕಂಬಗಳ ಮೇಲೆ ಹಿಂದೂ ದೇವರುಗಳ ಕೆತ್ತನೆಗಳಿವೆ. 
 
ಮುಂದುವರೆದಂತೆ ಲೂಯಿಸ್ ರೈಸ್ ಬರೆದಿರುವ ಮೈಸೂರು ಗೆಜೆಟ್‍ನಲ್ಲಿ, ಟಿಪ್ಪು ಸುಲ್ತಾನ್ ಪರ್ಷಿಯಾದ ಖಲೀಫನಿಗೆ ಬರೆದಿರುವ ಪತ್ರಗಳಲ್ಲೂ ಹಿಂದೂ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಬರೆಯಲಾಗಿದೆಯಂತೆ. ಹಾಗಾಗಿ ಮಸೀದಿ ವಾಪಾಸ್ ಪಡೆಯಬೇಕು ಅಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ಆರಾಧನೆಗೆ ಅವಕಾಶ ನೀಡಬೇಕು ಎಂದು ನರೇಂದ್ರ ಮೋದಿ ವಿಚಾರ ಮಂಚ್‍ನ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments