Webdunia - Bharat's app for daily news and videos

Install App

ಎಸ್ ಎಸ್ ಎಲ್ ಸಿ ಪರೀಕ್ಷೆ ಗೊಂದಲ

Webdunia
ಬುಧವಾರ, 29 ಡಿಸೆಂಬರ್ 2021 (20:43 IST)
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ (2021-22)ನೇ ಸಾಲಿನಲ್ಲಿ ಎಸೆಸೆಲ್ಸಿ ಓದುತ್ತಿರುವ ಮಕ್ಕಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸ ಬೇಕೇ? ಬೇಡವೇ ಎಂಬ ಗೊಂದಲ ನಿರ್ಮಾಣವಾಗಿದೆ.
 
 
ಡಿಸೆಂಬರ್‌ ತಿಂಗಳು ಮುಗಿದಿದ್ದು, ಮುಖ್ಯ ಪರೀಕ್ಷೆಗೆ 3-4 ತಿಂಗಳು ಮಾತ್ರ ಬಾಕಿ ಇದೆ. ಇದರ ನಡುವೆ ಪೂರ್ವಸಿದ್ಧತಾ ಪರೀಕ್ಷೆ ಕೂಡ ನಡೆಸಬೇಕಿದೆ. ಹೀಗಾಗಿ, ಮಧ್ಯ ವಾರ್ಷಿಕ ಪರೀಕ್ಷೆ ನಡೆಸುತ್ತಾರೋ ಇಲ್ಲವೋ ಎಂಬ ಸ್ಪಷ್ಟತೆ ಇಲ್ಲದಂತಾಗಿದೆ.
 
ಕೆಲವು ಖಾಸಗಿ ಶಾಲೆಗಳು ಹಾಗೂ ಸರಕಾರಿ ಶಾಲೆಗಳ ಶಿಕ್ಷಕರು ಮಧ್ಯವಾರ್ಷಿಕ ಪರೀಕ್ಷೆ ನಡೆಸಬೇಕು. ಆದರೆ, ಈ ವರೆಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿಲ್ಲ. ಅದನ್ನೇ ಎದುರು ನೋಡುತ್ತಿದ್ದೇವೆ ಎನ್ನುತ್ತಾರೆ. ಮತ್ತೆ ಕೆಲವು ಖಾಸಗಿ ಶಾಲೆಗಳು ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ(ಸಿಸಿಇ)ವನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷದ ದಸರಾ ರಜೆಗೂ ಮುನ್ನ ಮತ್ತು ಬಳಿಕ ಕ್ರಮವಾಗಿ ಎರಡು ರೂಪಣಾತ್ಮಕ ಮೌಲ್ಯಮಾಪನ ಮತ್ತು ಒಂದು ಸಂಕಲನಾತ್ಮಕ ಮೌಲ್ಯಮಾಪನ ನಡೆಸಲಾಗುತ್ತಿದೆ. ಮಧ್ಯವಾರ್ಷಿಕ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಲಾಗಿದೆ.
 
ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಾಗಿದೆ. ಆದರೆ, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸದಿರುವುದು ಗೊಂದಲ ಮೂಡಿಸಿದೆ ಹಾಗೂ ತಾರತಮ್ಯದಿಂದ ಕೂಡಿದೆ. ಒಂದು ವೇಳೆ ಒಮಿಕ್ರಾನ್‌ ಸೋಂಕು ತೀವ್ರಗೊಂಡು ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನಿಲ್ಲಿಸಿದರೆ, ಈ ಹಿಂದಿನ ವರ್ಷದಂತೆಯೇ ಈ ವರ್ಷವೂ ಅವೈಜ್ಞಾನಿಕವಾಗಿ ಫ‌ಲಿತಾಂಶ ನೀಡಬೇಕಾಗುತ್ತದೆ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments