Webdunia - Bharat's app for daily news and videos

Install App

ಎಸ್‌ಎಸ್ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ-ಮೇ 2ನೇ ವಾರ ಫಲಿತಾಂಶ

Webdunia
ಸೋಮವಾರ, 11 ಏಪ್ರಿಲ್ 2022 (18:54 IST)
ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ನಡೆಸಿದರು.
 
ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಸೋಮವಾರ (ಏ.11) ಸುದ್ದಿಗಾರರ ಜೊತೆಗೂಡಿದೆ.
 
‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.
 
‘ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದರು.
 
‘ನಾಳೆಯಿಂದ (ಏ.12) ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಮಾಹಿತಿ ನೀಡಿದರು. 
 
'ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ಅಂತಹ ಸಂದರ್ಭಗಳಲ್ಲಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆಯ ಸಮಯದಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ' ಎಂದು ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments