Webdunia - Bharat's app for daily news and videos

Install App

ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

Webdunia
ಸೋಮವಾರ, 12 ಮೇ 2014 (11:37 IST)
ಕಳೆದ ಮಾರ್ಚನಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಬೆಂಗಳೂರಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ರಿಸಲ್ಟ್‌ನ್ನು ಘೋಷಿಸಿದರು. 
 
ಪ್ರಸಕ್ತ ವರ್ಷ ಪ್ರತಿಶತ 81.19ರಷ್ಟು ಫಲಿತಾಂಶ ದಾಖಲಾಗಿದ್ದು, ಚಿಕ್ಕೋಡಿ (91.7) ಮೊದಲ ಸ್ಥಾನ, ಶಿರಸಿ ಎರಡನೇ, ಬೆಳಗಾವಿ ಮೂರನೇ ,ಮಂಡ್ಯ ನಾಲ್ಕನೇ ಸ್ಥಾನ ಪಡೆದರೆ ಬೀದರ್‌ಗೆ(75.35) ಕೊನೆ ಸ್ಥಾನ ಲಭಿಸಿದೆ. 

622 ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಪ್ರಥಮ ಸ್ಥಾನ ಗಳಿಸಿದ್ದು, ಎಂದಿನಂತೆ ಫಲಿತಾಂಶದಲ್ಲಿ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.
 
ಕರ್ನಾಟಕ ಬೋರ್ಡ್ ಆಫ್ ಸೆಂಕಡರಿ ಎಜುಕೇಶನ್ ಕಳೆದ ಮಾರ್ಚ್  28, 2014 ರಿಂದ 9 ಎಪ್ರೀಲ್  2014ರವರೆಗೆ  ಪರೀಕ್ಷೆಗಳನ್ನು ಆಯೋಜಿಸಿತ್ತು.
 
17 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದ್ದು, ಉನ್ನತ ಶ್ರೇಣಿಯಲ್ಲಿ ಪಾಸಾದವರ ಸಂಖ್ಯೆಯಲ್ಲಿ ಈ ಬಾರಿ ಹೆಚ್ಚಳವಾಗಿದೆ.ಹೊಸ ವಿದ್ಯಾರ್ಥಿಗಳು 85.37% ಫಲಿತಾಂಶವನ್ನು ದಾಖಲಿಸಿದರೆ, ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 45.8% ರಷ್ಟು ವಿದ್ಯಾರ್ಥಿಗಳು ಸಫಲತೆ ಸಾಧಿಸಿದ್ದಾರೆ. 
 
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನವಾಗಿದ್ದು, ಉತ್ತರಪತ್ರಿಕೆ ಪಡೆಯಲು ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮೇ 22. ಪೂರಕ ಪರೀಕ್ಷೆ  ಜೂನ್ 16 ರಂದು ನಡೆಯಲಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments