ಒಬ್ಬ ವಿದ್ಯಾರ್ಥಿನಿ ಹೊರತುಪಡಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲರೂ ಪಾಸ್!

Webdunia
ಸೋಮವಾರ, 9 ಆಗಸ್ಟ್ 2021 (19:28 IST)
ಆರು ದಿನ ನಡೆಯುತ್ತಿದ್ದ ಪರೀಕ್ಷೆಯನ್ನ ಈ ಬಾರಿ ಎರಡೇ ದಿನದಲ್ಲಿ ಪರೀಕ್ಷೆ ಮುಗಿಸಿದೆ. ಇಂದು ಬಹಳ ಕಾತರದಿಂದ ಕಾಯುತ್ತಿದ್ದ ಫಲಿತಾಂಶ ಹೊರಬಿದ್ದಿದೆ. ಒಬ್ಬ ವಿದ್ಯಾರ್ಥಿನಿ ಬಿಟ್ಟರೆ ಉಳಿದವರೆಲ್ಲರೂ ಪಾಸ್ ಆಗಿದ್ದಾರೆ.
2020-21ರ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ನೂತನ ಶಿಕ್ಷಣ ಸಚಿವ ನಾಗೇಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 8.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 99.9 ಮಕ್ಕಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆ ಬರೆದಂತ 4,70,160 ಬಾಲಕರು ಕೂಡ ಪಾಸ್ ಆಗಿದ್ದಾರೆ. ಇನ್ನು 4,01,281 ಹೆಣ್ಣು ಮಕ್ಕಳು ಪಾಸ್ ಆಗಿದ್ದಾರೆ. 30,7932 ಸರ್ಕಾರಿ ಶಾಲೆ ಮಕ್ಕಳು ಉತ್ತೀರ್ಣರಾಗಿದ್ದು, ಅನುದಾನಿತ 20,8515 ವಿದ್ಯಾರ್ಥಿಗಳು ಪಾಸ್, ಅನುದಾನರಹಿತ 26,4095 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಎ+ ಗ್ರೇಡ್ ನಲ್ಲಿ 1,28,931 ವಿದ್ಯಾರ್ಥಿಗಳು ತೇರ್ಗಡೆಯಾದರೆ, ಎ ಗ್ರೇಡ್ ಅಂಕ ಪಡೆದವರು 2,50,317 ವಿದ್ಯಾರ್ಥಿಗಳು, B ಗ್ರೇಡ್ ಪಡೆದವರು 2,87,684 ವಿದ್ಯಾರ್ಥಿಗಳು, ಸಿ ಗ್ರೇಡ್ ಅಂಕ ಪಡೆದವರು 1,13,610 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
625 ಅಂಕ ಪಡೆದವರು 150 
623 ಅಂಕ ಪಡೆದವರು 289 
622 ಅಂಕ ಪಡೆದವರು 2
621 ಅಂಕ ಪಡೆದವರು 449 
620 ಅಂಕ ಪಡೆದವರು 28
ಭಾಷಾವಾರು ಪಾಸ್ ಆದ ವಿದ್ಯಾರ್ಥಿಗಳನ್ನ ನೋಡೊದಾದ್ರೆ ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳು ಪಾಸ್, ದ್ವಿತಿಯ ಭಾಷೆ -36628 ಮಕ್ಕಳು, ತೃತೀಯ ಭಾಷೆ 36,776 ವಿದ್ಯಾರ್ಥಿಗಳು, ಗಣಿತ 6321 ವಿದ್ಯಾರ್ಥಿಗಳು ಪಾಸ್, ವಿಜ್ಞಾನ 3649 ವಿದ್ಯಾರ್ಥಿಗಳು ಪಾಸ್, ಸೋಷಿಯಲ್ ಸೈನ್ಸ್ 9,367 ವಿದ್ಯಾರ್ಥಿಗಳು. ಇನ್ನು ನಗರ ಪ್ರದೇಶದಲ್ಲಿ ಉತ್ತೀರ್ಣರಾದವರು 33,5081 ವಿದ್ಯಾರ್ಥಿಗಳು, ಗ್ರಾಮೀಣ ಭಾಗದಲ್ಲಿ ಪಾಸ್ ಆದವರು 44,5461. ಕಳೆದ ವರ್ಷ ನಗರ ಪ್ರದೇಶದಲ್ಲಿ ಶೇ. 73.41ರಷ್ಟು ಫಲಿತಾಂಶ ಬಂದಿದೆ.
ಇನ್ನು ಈ ಬಾರಿ ಪರೀಕ್ಷೆಗೆ ಹಾಜರಾದ ಯಾರನ್ನು ಫೇಲ್ ಮಾಡಲ್ಲ ಎಂದೇ ಹೇಳಲಾಗ್ತಾ ಇತ್ತು. ಹಾಗಾಗಿ ಎಲ್ಲರೂ ಪಾಸ್ ಆಗಿದ್ದಾರೆ. ಶೇ.9 ವಿದ್ಯಾರ್ಥಿಗಳು ಮಾತ್ರ ಗ್ರೇಸ್ ಮಾರ್ಕ್ಸ್ ಪಡೆದು ಪಾಸ್ ಆಗಿದ್ದಾರೆ. ಒಂದು ವಿಷಯಕ್ಕೆ 28‌ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. 13 ಮಕ್ಕಳಿಗೆ ಈ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಇನ್ನುಳಿದಂತೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿಯೇ ಬರೆದಿದ್ದಾರೆ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments