Webdunia - Bharat's app for daily news and videos

Install App

SSLC ಪರೀಕ್ಷಾ ಭಯ ನಿವಾರಣೆಗೆ ಬಂದ ಕಿರುಚಿತ್ರ ವೈರಲ್

Webdunia
ಶನಿವಾರ, 13 ಜೂನ್ 2020 (20:06 IST)
ಕೊರೊನಾ ಭೀತಿ ನಡುವೆಯೂ ಸುರಕ್ಷತಾ ಕ್ರಮಗಳ ಮೂಲಕ ಜೂನ್ 25 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಪಾಲಕರಲ್ಲಿ ಭಯ ಹೋಗಲಾಡಿಸಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ಮಾಡಿದೆ.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜೊತೆಗೂಡಿ 'ಜಾಗೃತಿಯೇ ಶ್ರೀರಕ್ಷೆ' ಎಂಬ ಕಿರುಚಿತ್ರವೊಂದನ್ನು ತಯಾರಿಸಿ ಇದರ ಮೂಲಕ ಪೋಷಕರು, ಮಕ್ಕಳಲ್ಲಿ ಇರುವ ಭಯವನ್ನು ಹೋಗಲಾಡಿಸಲು ಪ್ರಯತ್ನಿಸಿದೆ. ಕೊರೊನಾ ಪ್ರತಿದಿನ ಹೆಚ್ಚಾಗುತ್ತಿರುವ ಹಿನ್ನೆಲೆ ಸಹಜವಾಗಿ ಹೊರಗೆ ಬರಲು ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಇನ್ನು ಪರೀಕ್ಷೆಗೆ ಹೋಗುವುದೋ, ಬೇಡವೋ ಎಂಬುದರ ಬಗ್ಗೆ ಕೂಡಾ ಗೊಂದಲದಲ್ಲಿ ಕೆಲವರಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಕಿರುಚಿತ್ರ : 06 : 06 ನಿಮಿಷ ಅವಧಿಯ ಈ ಕಿರುಚಿತ್ರದಲ್ಲಿ ಪರೀಕ್ಷೆಯನ್ನು ಹೇಗೆ ಸುರಕ್ಷಿತವಾಗಿ ನಡೆಸಲಾಗುತ್ತದೆ. ಮುಂಜಾಗ್ರತಾ ಕ್ರಮಗಳೇನು..? ಎಂಬುದನ್ನು ತೋರಿಸಲಾಗಿದೆ. ಆದ್ದರಿಂದ ಭಯವಿಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಬಂದು ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಎಂದು ಮನವಿ ಮಾಡಲಾಗಿದೆ. ಶಿಕ್ಷಕರು ಹನುಮಂತಪ್ಪ ಕುರಿ ಪರಿಕಲ್ಪನೆಯಲ್ಲಿ ಮೂಡಿಬಂದಿರೋ ಈ ಕಿರುಚಿತ್ರವನ್ನುಸುರೇಶ ಕಂಬಳಿ ನಿರ್ವಹಣೆ ಮಾಡಿದ್ದಾರೆ.

ಕಿರುಚಿತ್ರ ಅಚ್ಚುಕಟ್ಟಾಗಿ ಮೂಡಿಬರಲು ಅವಿನಾಶ್ ಚೌಹಾಣ್ ಅವರ ಸಂಕಲನ ಮತ್ತು ಛಾಯಾಗ್ರಹಣ ಚಿತ್ರಕ್ಕಿದೆ. ಆಯಾ ಶಾಲಾ ಶಿಕ್ಷಕರ ಮೂಲಕ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಗ್ರೂಪ್ ಮೂಲಕ ಈ ಕಿರುಚಿತ್ರವನ್ನು ಹರಿಯಬಿಟ್ಟು ಜಾಗೃತಿ ಮೂಡಿಸಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments