Select Your Language

Notifications

webdunia
webdunia
webdunia
webdunia

ಶಾಸಕರ ಮನೆ ಮೇಲೆ ಕಲ್ಲು ತೂರಾಟ; ರಾಜ್ಯಪಾಲರಿಗೆ ಬಿಜೆಪಿ ದೂರು

ಶಾಸಕರ ಮನೆ ಮೇಲೆ ಕಲ್ಲು ತೂರಾಟ; ರಾಜ್ಯಪಾಲರಿಗೆ ಬಿಜೆಪಿ ದೂರು
ಬೆಂಗಳೂರು , ಗುರುವಾರ, 14 ಫೆಬ್ರವರಿ 2019 (16:40 IST)
ಆಪರೇಷನ್ ಕಮಲದ ಆಡಿಯೋ ಗದ್ದಲ ಇನ್ನೂ ಮುಗಿದಿಲ್ಲ. ಈ ನಡುವೆ ಕಲ್ಲು ತೂರಾಟದ ಪ್ರಕರಣ ಸದ್ದು ಮಾಡಲಾರಂಭಿಸಿದೆ.

ಹಾಸನದ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಿರುವ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಹೀಗಂತ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರದಿಂದ ಕುರಿತು ವರದಿ ಪಡೆದು ಸಮಗ್ರ ತನಿಖೆಗೆ ಆದೇಶಿಸಬೇಕು ಎಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರ  ನೇತೃತ್ವದಲ್ಲಿನ ಶಾಸಕರ ನಿಯೋಗ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

ಪಾದಯಾತ್ರೆಯುದ್ದಕ್ಕೂ ಶಾಸಕರು ಸರ್ಕಾರದ ಗೂಂಡಾಗಿರಿ ವರ್ತನೆ ಹಾಗೂ ಅಧಿಕಾರ ದರ್ಪ ನಡೆಸುತ್ತಿರುವುದರ ವಿರುದ್ಧ ಘೋಷಣೆಗಳನ್ನು ಕೂಗಿದರು.  
 


Share this Story:

Follow Webdunia kannada

ಮುಂದಿನ ಸುದ್ದಿ

ಶವ ಸಂಸ್ಕಾರಕ್ಕೆ ಹೋದಾದ ಸ್ಮಶಾನದಲ್ಲಿ ಆಗಿದ್ದೇನು?