Publish Date: Sun, 04 May 2025 (22:18 IST)
Updated Date: Sun, 04 May 2025 (22:21 IST)
ಬೆಂಗಳೂರು: ಕರ್ನಾಟಕದ ಕಲಬುರಗಿಯಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.
ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ತೆಗೆದುಕೊಳ್ಳಲು ಅನುಮತಿಸುವ ಮೊದಲು ತಮ್ಮ ಪವಿತ್ರ ದಾರವನ್ನು (ಜನಿವಾರ) ತೆಗೆಯುವಂತೆ ಕೇಳಲಾಗಿದೆ ಎಂದು ಆರೋಪಿಸಲಾಗಿದೆ.
ಕಲಬುರಗಿಯ ನೀಟ್ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮುದಾಯದ ದೊಡ್ಡ ಗುಂಪು ಭಾನುವಾರ ಘೋಷಣೆಗಳನ್ನು ಕೂಗಿ ಧರಣಿ ನಡೆಸಿತು.
ಶ್ರೀಪಾದ್ ಪಾಟೀಲ್ ಎಂಬ ಅಭ್ಯರ್ಥಿಯಲ್ಲಿ ಪರೀಕ್ಷೆಗೂ ಮೊದಲು ಅವರ ಜನಿವಾರವನ್ನು ತೆಗೆಯುವಂತೆ ಹೇಳಲಾಯಿತು. ಈ ಘಟನೆ ಬಳಿಕ ಪ್ರತಿಭಟನೆ ನಡೆಸಲಾಯಿತು.
ಇದಕ್ಕೆ ಪ್ರತಿಯಾಗಿ, ಸಮುದಾಯದ ದೊಡ್ಡ ಗುಂಪು ಸ್ಥಳದಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಧರಣಿ ನಡೆಸಿತು. ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಅಗೌರವ ತೋರುತ್ತಿದ್ದಾರೆ ಮತ್ತು ಸರ್ಕಾರದ ಸ್ವಂತ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
Sampriya
Publish Date: Sun, 04 May 2025 (22:18 IST)
Updated Date: Sun, 04 May 2025 (22:21 IST)