ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಚಿತ್ರದುರ್ಗದ ಗುರುಪೀಠದ ನಾಗಸಾಧು ಸಾವು

Sampriya
ಶುಕ್ರವಾರ, 31 ಜನವರಿ 2025 (18:54 IST)
Photo Courtesy X
ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳದಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ ನಗರದ ಬಂಜಾರ ಗುರುಪೀಠದ ನಾಗಸಾಧುನಾಗನಾಥ್‌ ಮಹರಾಜ್‌ (48) ಅವರು ಮೃತಪಟ್ಟಿದ್ದಾರೆ. ಈ ವಿಷಯವನ್ನು ಬಂಜಾರ ಗುರುಪೀಠದ ಸೇವಾಲಾಲ್ ಸ್ವಾಮೀಜಿ ಖಚಿತಪಡಿಸಿದ್ದಾರೆ.

ತಾಲ್ಲೂಕಿನ ಸಿಬಾರದಲ್ಲಿರುವ ಬಂಜಾರ ಗುರುಪೀಠದಲ್ಲಿ ನಾಗನಾಥ್‌ ಮಹರಾಜ್‌ 7 ವರ್ಷಗಳಿಂದ ವಾಸಿಸುತ್ತಿದ್ದರು. 15 ದಿನಗಳ ಹಿಂದಷ್ಟೇ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಇದೀಗ ಅಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗುರುಪೀಠದ ಸೇವಾವಾಲ್ ಸ್ವಾಮೀಜಿ ಅವರು, ಪವಾಡಪುರುಷರಾಗಿದ್ದ ಅವರು ನಮ್ಮ  ಗುರುಪೀಠಕ್ಕೆ ಬಂದಿದ್ದೇ ಆಶ್ಚರ್ಯ. ಅವರ ಮೂಲ ಯಾವುದು ಎಂಬುದು ಯಾರಿಗೂ ಗೊತ್ತಿಲ್ಲ. ಅವರ ಸಾವಾಗಿರುವುದು ನೋವು ತಂದಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹಂತ ಹಂತವಾಗಿ ಭಕ್ತರನ್ನು ಬಿಡುತ್ತಿದ್ದರೆ ಈ ಅನಾಹುತ ಆಗುತ್ತಿರಲಿಲ್ಲ ಎಂದರು,

ಪ್ರಯಾಗ್‌ರಾಜ್‌ನಲ್ಲಿ ಅನಾಥವಾಗಿರುವ ಮಹಾನ್ ಜ್ಞಾನಿಯಾಗಿದ್ದ ನಾಗನಾಥ್‌ ಮಹರಾಜ್‌ ಅವರ ಪಾರ್ಥಿವ ಶರೀರವನ್ನು ಕೂಡಲೇ ಕರ್ನಾಟಕ ಸರ್ಕಾರ ಅವರ ಮೃತಹದೇಹವನ್ನು ತರಲು ವ್ಯವಸ್ಥೆ ಮಾಡಬೇಕು. ಪಾರ್ಥಿವ ಶರೀರವನ್ನು ಮಠಕ್ಕೆ ನೀಡಿದರೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments