ಗರ್ಭಗುಡಿಯಲ್ಲಿ ನಿಂತು 'ರಾಮಲಲ್ಲಾ'ನಿಗೆ ಅರತಿ ಬೆಳಗಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Sampriya
ಗುರುವಾರ, 2 ಮೇ 2024 (15:36 IST)
Photo Courtesy X
ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಯೋಧ್ಯೆಗೆ ತೆರಳಿ ಗರ್ಭಗುಡಿಯಲ್ಲಿ ನಿಂತು ರಾಮಲಲ್ಲಾನಿಗೆ ಅರತಿ ಬೆಳಗಿ ದರ್ಶನ ಪಡೆದರು.

ಅಯೋಧ್ಯೆಯಲ್ಲಿ ಜನವರಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನಡೆದಿತ್ತು. ಈ ಕೈಂಕರ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಾಗಿತ್ತು. ಈ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ನಾಯಕರು, ಪ್ರತಿಷ್ಠಾಪನೆಯನ್ನು ದೇಶದ ಮೊದಲ ಪ್ರಜೆ ರಾಷ್ಟ್ರಪತಿಯವರ ಅವರಿಂದ ನೆರವೇರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದರು. ಅಲ್ಲದೆ ಬುಡಗಟ್ಟು ಸಮುದಾಯದವರು ಎಂಬ ಕಾರಣಕ್ಕಾಗಿ ಅವರನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಲೋಕಸಭೆ ಪ್ರಚಾರ ಸಭೆಯಲ್ಲೂ ಕಾಂಗ್ರೆಸ್ ಈ ವಿಚಾರವನ್ನು ಪ್ರಸ್ತಾಪಿಸಿ ಪ್ರಧಾನಿಯನ್ನು ಟೀಕಿಸಿತ್ತು.

ಇದರ ಬೆನ್ನಲ್ಲೇ ಇದೀಗ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಭೇಟಿ ನೀಡಿ ಶ್ರೀ ರಾಮಲಲಾನ ದರ್ಶನ ಪಡೆದು ಆರತಿ ಬೆಳಗಿ, ಪ್ರಾರ್ಥನೆ ಸಲ್ಲಿಸಿದರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ದರ್ಶನ ಪಡೆಯುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್‌ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಸರಯೂ ಘಾಟ್‌ನಲ್ಲಿ ವಿಶೇಷ ಪೂಜೆಯೊಂದಿಗೆ ಗಂಗಾ ಆರತಿ ಕಾರ್ಯಕ್ರಮದಲ್ಲೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಮುಂದಿನ ಸುದ್ದಿ
Show comments