Select Your Language

Notifications

webdunia
webdunia
webdunia
webdunia

ಬೀದಿಯಲ್ಲಿ ನಿಂತು ಹೋರಾಟ ಮಾಡಲು ಆಗಲ್ಲ: ಕುಮಾರಸ್ವಾಮಿ

ಬೀದಿಯಲ್ಲಿ ನಿಂತು ಹೋರಾಟ ಮಾಡಲು ಆಗಲ್ಲ: ಕುಮಾರಸ್ವಾಮಿ
ಮೈಸೂರು , ಬುಧವಾರ, 7 ಸೆಪ್ಟಂಬರ್ 2016 (18:38 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತಂತೆ ಬೀದಿಯಲ್ಲಿ ನಿಂತು ಹೋರಾಟ ಮಾಡಲು ಆಗಲ್ಲ.ಕಾನೂನು ಹೋರಾಟದಿಂದ ಮಾತ್ರ ಪರಿಹಾರ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ.  ಟೈರ್ ಸುಟ್ಟಾಗಷ್ಟೆ ಮಂಡ್ಯ ಜನರೊಂದಿಗೆ ಇರ್ತಿವಿ ಅಂತಲ್ಲ, ನಾವು ಸಾಯಿವವರೆಗೆ ನಿಮ್ಮ ಜೊತೆ ಇರುತ್ತೇವೆ. ಯಾವುದೇ ರೀತಿಯ ಅನುಮಾನ ಬೇಡ ಎಂದು ಭರವಸೆ ನೀಡಿದರು.
 
ಕೆಲವರು ನನ್ನ ಬಗ್ಗೆ ಟೀಕೆಗಳನ್ನು ಮಾಡಿದ್ದಾರೆ. ಆದರೆ, ಅದರ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
 ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಸಲಹೆಯಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕಾಗಿ ಯಾವ ದಾರಿಗಳಿವೆ ಎನ್ನುವ ಬಗ್ಗೆ ಮಾತುಕತೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರತಿಯೊಬ್ಬರ ಹೋರಾಟ ಬೇರೆ ಬೇರೆ ತೆರನದ್ದಾಗಿರುತ್ತದೆ. ಕೇವಲ ಕೋಪದ ಭರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದಲ್ಲಿ ನ್ಯಾಯ ದೊರೆಯುವುದಿಲ್ಲ ಎಂದರು.
 
ಸರ್ವ ಪಕ್ಷಗಳ ಸಭೆಯಲ್ಲಿ  ಯಾಕೆ ಪಾಲ್ಗೊಂಡಿಲ್ಲ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗಳ ನೋಡಲು ಸರ್ವಪಕ್ಷಗಳ ಸಭೆಗೆ ಹೋಗಬೇಕಾಗಿತ್ತಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ವಿಸರ್ಜನೆಗೆ ತೆರಳಿದ್ದ 12 ಕ್ಕೂ ಹೆಚ್ಚು ಜನರು ನದಿ ಪಾಲು