Webdunia - Bharat's app for daily news and videos

Install App

ಬೀದಿಯಲ್ಲಿ ನಿಂತು ಹೋರಾಟ ಮಾಡಲು ಆಗಲ್ಲ: ಕುಮಾರಸ್ವಾಮಿ

Webdunia
ಬುಧವಾರ, 7 ಸೆಪ್ಟಂಬರ್ 2016 (18:38 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತಂತೆ ಬೀದಿಯಲ್ಲಿ ನಿಂತು ಹೋರಾಟ ಮಾಡಲು ಆಗಲ್ಲ.ಕಾನೂನು ಹೋರಾಟದಿಂದ ಮಾತ್ರ ಪರಿಹಾರ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ.  ಟೈರ್ ಸುಟ್ಟಾಗಷ್ಟೆ ಮಂಡ್ಯ ಜನರೊಂದಿಗೆ ಇರ್ತಿವಿ ಅಂತಲ್ಲ, ನಾವು ಸಾಯಿವವರೆಗೆ ನಿಮ್ಮ ಜೊತೆ ಇರುತ್ತೇವೆ. ಯಾವುದೇ ರೀತಿಯ ಅನುಮಾನ ಬೇಡ ಎಂದು ಭರವಸೆ ನೀಡಿದರು.
 
ಕೆಲವರು ನನ್ನ ಬಗ್ಗೆ ಟೀಕೆಗಳನ್ನು ಮಾಡಿದ್ದಾರೆ. ಆದರೆ, ಅದರ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
 ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಸಲಹೆಯಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕಾಗಿ ಯಾವ ದಾರಿಗಳಿವೆ ಎನ್ನುವ ಬಗ್ಗೆ ಮಾತುಕತೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರತಿಯೊಬ್ಬರ ಹೋರಾಟ ಬೇರೆ ಬೇರೆ ತೆರನದ್ದಾಗಿರುತ್ತದೆ. ಕೇವಲ ಕೋಪದ ಭರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದಲ್ಲಿ ನ್ಯಾಯ ದೊರೆಯುವುದಿಲ್ಲ ಎಂದರು.
 
ಸರ್ವ ಪಕ್ಷಗಳ ಸಭೆಯಲ್ಲಿ  ಯಾಕೆ ಪಾಲ್ಗೊಂಡಿಲ್ಲ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗಳ ನೋಡಲು ಸರ್ವಪಕ್ಷಗಳ ಸಭೆಗೆ ಹೋಗಬೇಕಾಗಿತ್ತಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments