Webdunia - Bharat's app for daily news and videos

Install App

ಎಲ್ಲಾ ರೀತಿಯ ವ್ಯಾಪಾರ, ವಹಿವಾಟು ಶುರು

Webdunia
ಸೋಮವಾರ, 25 ಮೇ 2020 (12:53 IST)
ಕೋವಿಡ್-19 ಸೋಂಕು ಕುರಿತು ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ತ್ವರಿತವಾಗಿ ಮುಗಿಸಿ, ಇದೇ 31ರ ನಂತರ ವ್ಯಾಪಾರ-ವಹಿವಾಟಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು.

ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟು ತೆರೆಯುವ ಸಂಬಂಧ ಚರ್ಚಿಸಲು ಕರೆದಿದ್ದ ಎಫ್‍ಕೆಸಿಸಿಐ ಮತ್ತು ವಿವಿಧ ವರ್ತಕರ ಸಭೆಯಲ್ಲಿ ಮಾತನಾಡಿದರು.

ಎಫ್‍ಕೆಸಿಸಿಐ ಅಧ್ಯಕ್ಷ ಅಮರ್‍ನಾಥ್ ಪಾಟೀಲ್, ವರ್ತಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನ ಸೆಳೆದರು. 30 ಸಾವಿರಕ್ಕೂ ಹೆಚ್ಚು ನೌಕರರು ಈ ವಲಯದಲ್ಲಿದ್ದು, ಅವರಿಗೆ ವೇತನ ನೀಡಬೇಕು. ಜೊತೆಗೆ ಸ್ಟಾಕ್ ಇರುವ ಪದಾರ್ಥ ಮುಂತಾದವು ಹಾಳಾಗುತ್ತವೆ. ಅಂಗಡಿ-ಮಳಿಗೆಗಳ ಬಾಡಿಗೆ ಪಾವತಿಸಬೇಕು ಮುಂತಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ರ್ಯಾಂಡಮ್ ಸ್ಯಾಂಪ್ಲಿಂಗ್ ಕೋವಿಡ್ ಪರೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ತೊಂದರೆಯಾಗಬಾರದು. 31ರ ಹೊತ್ತಿಗೆ ವ್ಯಾಪಾರ ವಹಿವಾಟಿಗೆ ಮುಕ್ತ ವಾತಾವರಣ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments