Webdunia - Bharat's app for daily news and videos

Install App

ಎಲ್ಲಾ ರೀತಿಯ ವ್ಯಾಪಾರ, ವಹಿವಾಟು ಶುರು

Webdunia
ಸೋಮವಾರ, 25 ಮೇ 2020 (12:53 IST)
ಕೋವಿಡ್-19 ಸೋಂಕು ಕುರಿತು ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ತ್ವರಿತವಾಗಿ ಮುಗಿಸಿ, ಇದೇ 31ರ ನಂತರ ವ್ಯಾಪಾರ-ವಹಿವಾಟಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು.

ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟು ತೆರೆಯುವ ಸಂಬಂಧ ಚರ್ಚಿಸಲು ಕರೆದಿದ್ದ ಎಫ್‍ಕೆಸಿಸಿಐ ಮತ್ತು ವಿವಿಧ ವರ್ತಕರ ಸಭೆಯಲ್ಲಿ ಮಾತನಾಡಿದರು.

ಎಫ್‍ಕೆಸಿಸಿಐ ಅಧ್ಯಕ್ಷ ಅಮರ್‍ನಾಥ್ ಪಾಟೀಲ್, ವರ್ತಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನ ಸೆಳೆದರು. 30 ಸಾವಿರಕ್ಕೂ ಹೆಚ್ಚು ನೌಕರರು ಈ ವಲಯದಲ್ಲಿದ್ದು, ಅವರಿಗೆ ವೇತನ ನೀಡಬೇಕು. ಜೊತೆಗೆ ಸ್ಟಾಕ್ ಇರುವ ಪದಾರ್ಥ ಮುಂತಾದವು ಹಾಳಾಗುತ್ತವೆ. ಅಂಗಡಿ-ಮಳಿಗೆಗಳ ಬಾಡಿಗೆ ಪಾವತಿಸಬೇಕು ಮುಂತಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ರ್ಯಾಂಡಮ್ ಸ್ಯಾಂಪ್ಲಿಂಗ್ ಕೋವಿಡ್ ಪರೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ತೊಂದರೆಯಾಗಬಾರದು. 31ರ ಹೊತ್ತಿಗೆ ವ್ಯಾಪಾರ ವಹಿವಾಟಿಗೆ ಮುಕ್ತ ವಾತಾವರಣ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments