ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ: ಸಚಿವ ಬಿ ಸಿ ನಾಗೇಶ್

Webdunia
ಶುಕ್ರವಾರ, 21 ಜನವರಿ 2022 (21:08 IST)
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಇದರ ಜೊತೆಗೆ ರಾಜ್ಯಾದ್ಯಂತ ಶಾಲಾ-ಕಾಲೇಜು ನಡೆಯಲಿವೆ ಎಂದು ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್‌ ತಜ್ಞರ ಜೊತೆ ಸಿಎಂ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಬೆಂಗಳೂರಿನಲ್ಲಿ ಶಾಲೆಗಳ ಆರಂಭ ಕುರಿತು ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು ಬಿಟ್ಟು ಶಾಲಾ ಕಾಲೇಜು ಇನ್ನುಳಿದ ಎಲ್ಲಾ ಕಡೆಯಲ್ಲಿ ಇದೆ. ಪಾಸಿಟಿವಿಟಿ ದರ ಆಧರಿಸಿ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣದಿಂದಾಗಿ ಶಾಲೆಗಳಿಗೆ ರಜೆ ಮುಂದುವರೆಯಲಿದೆ. ಜ.29ರವರೆಗೆ ಶಾಲೆಗಳನ್ನ ಮುಚ್ಚುವ ನಿರ್ಧಾರ ಮುಂದುವರೆಯಲಿದೆ.
ಎಲ್ಲಿಯಾದರೂ ಪಾಸಿಟಿವ್ ಬಂದರೆ ಆ ಶಾಲೆ ಮಾತ್ರ ಬಂದ್ ಮಾಡಬೇಕು, ಹೆಚ್ಚು ಪಾಸಿಟಿವ್ ಬಂದರೆ 7 ದಿನ, ಕಡಿಮೆ ಬಂದರೆ ಮೂರು ದಿನ ಶಾಲೆಗಳನ್ನ ಬಂದ್ ಮಾಡಿ ನಂತರ ಶಾಲೆಯನ್ನು ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
6 ರಿಂದ15 ವರ್ಷದ ಮಕ್ಕಳಿಗೆ ಪಾಸಿಟಿವಿಟಿ ದರ ಕಡಿಮೆ ಇರುವುದರಿಂದ ಈಗ ಇರುವ ರೀತಿಯಲ್ಲೇ ಶಾಲೆಗಳನ್ನ ನಡೆಸಲಾಗುತ್ತದೆ. ನಾಲ್ಕೈದು ಜಿಲ್ಲೆಗಳಲ್ಲಿ ನಿರ್ಬಂಧ ಇತ್ತು. ಅಲ್ಲಿಯೂ ಕೂಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಅಲ್ಲಿಯೂ ಪುನರ್ ಪರಿಶೀಲಿಸಿ ಬಂದ್ ಅಗತ್ಯ ಇಲ್ಲ ಎನ್ನುವ ಕಡೆ ಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments