Publish Date: Thu, 25 Jul 2019 (09:59 IST)
Updated Date: Thu, 25 Jul 2019 (10:01 IST)
ನವದೆಹಲಿ : ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡ ಹಿನ್ನಲೆಯಲ್ಲಿ ಸರ್ಕಾರ ರಚನೆ ಮಾಡಲು ಸಲುವಾಗಿ ರಾಜ್ಯ ಬಿಜೆಪಿ ನಿಯೋಗ ಹೈಕಮಾಂಡ್ ನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡರೂ ಸರ್ಕಾರ ರಚನೆಗೆ ಬಿಜೆಪಿ ಹೈಕಮಾಂಡ್ ನಿಂದ ಯಾವುದೇ ಸಲಹೆ, ಸೂಚನೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಬಿಜೆಪಿ ನಾಯಕರು, ಅದಕ್ಕಾಗಿ ನಿನ್ನೆ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ.
ರಾಜ್ಯ ಬಿಜೆಪಿ ನಿಯೋಗದಲ್ಲಿ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಮಾಧುಸ್ವಾಮಿ, ಕೆ.ಜಿ. ಬೋಪಯ್ಯ, ಬಿ.ವೈ ವಿಜಯೇಂದ್ರ ರಾತ್ರಿ 10 ಗಂಟೆಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸರ್ಕಾರದ ರಚನೆಯ ಕುರತು ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.