Select Your Language

Notifications

webdunia
webdunia
webdunia
webdunia

ರಾಜ್ಯ ಬಿಜೆಪಿ ನಾಯಕರು ರಾಜ್ಯದ ಉತ್ತರ ಕುಮಾರರೇ ಸರಿ- ರಾಜ್ಯ ಕಾಂಗ್ರೆಸ್ ಟ್ವೀಟ್

ರಾಜ್ಯ ಬಿಜೆಪಿ ನಾಯಕರು ರಾಜ್ಯದ ಉತ್ತರ ಕುಮಾರರೇ ಸರಿ- ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು , ಶನಿವಾರ, 21 ಸೆಪ್ಟಂಬರ್ 2019 (10:10 IST)
ಬೆಂಗಳೂರು : ನೆರೆಯಿಂದ ದಿಕ್ಕೆಟ್ಟು ನಿಂತಿರುವ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡದೆ ದರ್ಪದ ಮಾತನಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.




ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ. ಸಂವೇದನೆ ತೋರಿರುವ ಇವ್ರು ರಾಜ್ಯದ ಉತ್ತರ ಕುಮಾರರೇ ಸರಿ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲ ‘ಎಂದ ಸಿಎಂ ಯಡಿಯೂರಪ್ಪ, ‘ರೂ.10000 ಕೊಟ್ಟಿದ್ದೇ ಹೆಚ್ಚಾಯ್ತು’ ಎಂದ ಸಚಿವ ಈಶ್ವರಪ್ಪ, ‘ಶಾಲಾ ಮಕ್ಕಳು ದೇಣಿಗೆ ಸಂಗ್ರಹಿಸಬೇಕು’ ಎಂದ ಡಿಸಿಎಂ ಅಶ್ವತ್ ನಾರಾಯಣ್, ‘ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ‘ ಎಂದ ತೇಜಸ್ವಿ ಸೂರ್ಯ ಅವರ ಹೇಳಿಕೆಗಳನ್ನು ಉಲ್ಲೇಖಿಸಿ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಕಳುಹಿಸಿದ ಉಗ್ರರು