Select Your Language

Notifications

webdunia
webdunia
webdunia
webdunia

ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು- ಪ್ರಿಯಾಂಕ್ ಖರ್ಗೆ ಕಿಡಿ

ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು- ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು , ಶುಕ್ರವಾರ, 4 ಅಕ್ಟೋಬರ್ 2019 (11:01 IST)
ಬೆಂಗಳೂರು : ನೆರೆ ಸಂತ್ರಸ್ತರಿಗೆ ಇನ್ನು ಪರಿಹಾರ ಕೊಡಿಸದ ರಾಜ್ಯ ಬಿಜೆಪಿ ಸಂಸದರ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.




ಪ್ರವಾಹ ಸಂತ್ರಸ್ತ ರೈತ ಚಂದ್ರೆಗೌಡ ಆತ್ಮಹತ್ಯೆ  ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು. ಪ್ರವಾಹ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.


ರಾಜ್ಯದ ಪರ ಬ್ಯಾಟ್ ಬೀಸದವರು ಪೇಪರ್ ಹುಲಿಗಳು. ಪ್ರಧಾನಿಯವರ ಬಳಿ ಪರಿಹಾರ ಕೇಳಲು ಹೆದರುತ್ತಿರುವುದು ಏಕೆ? ರಾಜ್ಯದಲ್ಲಿ ಇನ್ನು ಎಷ್ಟು ನೆರೆ ಸಂತ್ರಸ್ತರು ಸಾಯಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿರುವ ಸಚಿವ ಡಿವಿ ಸದಾನಂದ ಗೌಡ