Publish Date: Mon, 20 Dec 2021 (22:17 IST)
Updated Date: Mon, 20 Dec 2021 (22:20 IST)
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಿಧೇಯಕ ಮಂಡನೆ, ಲವ್ ಜಿಹಾದ್ ಕಾಯ್ದೆ ಮಂಡಿಸಲು ಒಪ್ಪಿಗೆ ನೀಡಲಾಗಿದೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮತಾಂತರ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆಯನ್ನು ಮಂಡಿಸಿ ಅನುಮೋದನೆ ಪಡೆಯಲು ಸಿಎಂ ಬೊಮ್ಮಾಯಿ ಇಂದು ಕರೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ನಾಳೆ ಹಿನ್ನೆಲೆ ಮಂಡನೆಯಾಗುವ ಸಾಧ್ಯತೆಯಿದೆ.
ಆದರೆ ಪ್ರತಿ ಪಕ್ಷಗಳ ತ್ರಿವಳಿ ವಿರೋಧವಿದ್ದು, ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಸರ್ವ ಸಿದ್ಧತೆ ನಡೆಸಿದೆ. ವಿಧೇಯಕಗೊಳಂದಿಗೆ ಕೆಲ ಪ್ರಶ್ನಾವಳಿಗಳು, ಬದಲಾವಣೆಯೊಂದಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗೋ ಸಾಧ್ಯತೆ ಇದೆ.
ಸಚಿವ ಸಂಪುಟ ಸಭೆಯ ಮಾಧ್ಯಮಗಳಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಾಳೆ ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದರು.