ಭಾರಿ ಮಳೆಗೆ ರಾಜ್ಯ ರಾಜಧಾನಿ ತತ್ತರ

Webdunia
ಶನಿವಾರ, 27 ಆಗಸ್ಟ್ 2022 (13:33 IST)
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹಲವು ಕಡೆ ರಾತ್ರಿ ಪೂರ್ತಿ ಜಿಟಿ ಜಿಟಿ ಮಳೆ ಸುರಿದ್ದು, ನಗರದ ಕೆಲ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿತ್ತು. ಶಾಂತಿನಗರ, ಜಯನಗರ, ಕೆ.ಆರ್ ಪುರ, ಹಲಸೂರು, ಬನಶಂಕರಿ, ಮೆಜೆಸ್ಟಿಕ್ ಸೇರಿ ನಗರದ ಬಹುತೇಕ ಕಡೆ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಸ್ವಲ್ಪ ಜೋರಾಗಿ ಮಳೆ ಸುರಿದಿದೆ. ಲಾಲ್ ಬಾಗ್ ವೆಸ್ಟ್ ಗೇಟ್ ಕಡೆಯಿಂದ ಸೌತೆ ಎಂಡ್ ಸರ್ಕಲ್​ಗೆ ತೆರಳುವ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಸುಮಾರು ಐವತ್ತು ಮೀಟರ್​ನಷ್ಟು ದೂರ, ಸುಮಾರು ಒಂದು ಅಡಿಯಷ್ಟು ನೀರು ರಸ್ತೆಯಲ್ಲಿ ನಿಂತಿತ್ತು. ಒಳಚರಂಡಿ ಅವ್ಯವಸ್ಥೆಯ ಕಾರಣದಿಂದ ರಸ್ತೆ ಮೇಲೆ ನೀರು ಹರಿದಿದೆ. ಬಿಟಿಎಂ ಲೇಔಟ್​​ನ ಬಿಳೇಕಹಳ್ಳಿ ವಾರ್ಡ್​​ನ ಅನುಗ್ರಹ ಬಡವಾಣೆಯ ಮೊದಲನೇ ಹಂತದ ಎರಡು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಒಂದು ಗಂಟೆ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ನೀರು ನಿಂತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments