Webdunia - Bharat's app for daily news and videos

Install App

ಭಾರಿ ಮಳೆಗೆ ರಾಜ್ಯ ರಾಜಧಾನಿ ತತ್ತರ

Webdunia
ಶನಿವಾರ, 27 ಆಗಸ್ಟ್ 2022 (13:33 IST)
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹಲವು ಕಡೆ ರಾತ್ರಿ ಪೂರ್ತಿ ಜಿಟಿ ಜಿಟಿ ಮಳೆ ಸುರಿದ್ದು, ನಗರದ ಕೆಲ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿತ್ತು. ಶಾಂತಿನಗರ, ಜಯನಗರ, ಕೆ.ಆರ್ ಪುರ, ಹಲಸೂರು, ಬನಶಂಕರಿ, ಮೆಜೆಸ್ಟಿಕ್ ಸೇರಿ ನಗರದ ಬಹುತೇಕ ಕಡೆ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಸ್ವಲ್ಪ ಜೋರಾಗಿ ಮಳೆ ಸುರಿದಿದೆ. ಲಾಲ್ ಬಾಗ್ ವೆಸ್ಟ್ ಗೇಟ್ ಕಡೆಯಿಂದ ಸೌತೆ ಎಂಡ್ ಸರ್ಕಲ್​ಗೆ ತೆರಳುವ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಸುಮಾರು ಐವತ್ತು ಮೀಟರ್​ನಷ್ಟು ದೂರ, ಸುಮಾರು ಒಂದು ಅಡಿಯಷ್ಟು ನೀರು ರಸ್ತೆಯಲ್ಲಿ ನಿಂತಿತ್ತು. ಒಳಚರಂಡಿ ಅವ್ಯವಸ್ಥೆಯ ಕಾರಣದಿಂದ ರಸ್ತೆ ಮೇಲೆ ನೀರು ಹರಿದಿದೆ. ಬಿಟಿಎಂ ಲೇಔಟ್​​ನ ಬಿಳೇಕಹಳ್ಳಿ ವಾರ್ಡ್​​ನ ಅನುಗ್ರಹ ಬಡವಾಣೆಯ ಮೊದಲನೇ ಹಂತದ ಎರಡು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಒಂದು ಗಂಟೆ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ನೀರು ನಿಂತಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments