Webdunia - Bharat's app for daily news and videos

Install App

ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ: ವಿ.ಶ್ರೀನಿವಾಸ್ ಪ್ರಸಾದ್

Webdunia
ಬುಧವಾರ, 22 ಜೂನ್ 2016 (20:03 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆಯಲ್ಲಿ ತೋರಿದ ವರ್ತನೆಯಿಂದಾಗಿ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
 
 ನಾನು ಸಿದ್ದರಾಮಯ್ಯ ಸಮಾನ ಮನಸ್ಕರು. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಘೋಷಿಸಿದ್ದು ಮೊದಲನೇ ಬಾರಿಯಾಗಿತ್ತು. ಆದರೆ, ನಾವಿಬ್ಬರು ಒಳ್ಳೆಯ ಗೆಳೆಯರಾಗಿದ್ದರೂ ಕೂಡಾ ನನಗೆ ಒಂದು ಮಾತನ್ನೂ ಹೇಳದೆ ಸಚಿವ ಸಂಪುಟದಿಂದ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅನಾಗರಿಕ ವರ್ತನೆ ತೋರಿದ್ದಾರೆ. ನಾವಿಬ್ಬರು ಅತ್ಯಂತ ಆತ್ಮಿಯರು. ಆದರೆ. ಯಾವ ಕಾರಣಕ್ಕೆ ಸಿದ್ದರಾಮಯ್ಯ ಹೀಗೆ ವರ್ತಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
 
ಸಂಪುಟದಿಂದ ಕೈಬಿಟ್ಟಿರುವುದಕ್ಕೆ ನೋವಾಗಿಲ್ಲ. ಆದರೆ ಒಂದು ವಿಷಯವನ್ನೂ ಹೇಳದೆ ಸಂಪುಟದಿಂದ ಕಿತ್ತು ಹಾಕಿರುವುದು ನೋವು ತಂದಿದೆ ಎಂದರು.
 
ಅಹಿಂದ ಸಂಘಟನೆಗೆ ನಾನು ಚಾಲನೆ ನೀಡಿದ್ದೇನೆ. ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಮೈಸೂರು ಭಾಗದಲ್ಲಿ  ಅಭಿವೃದ್ಧಿಯನ್ನು ಮಾಡಿದ್ದೇನೆ. ಮತ್ತೆ ಕರೆದು ಮಂತ್ರಿ ಪಟ್ಟ ಕೊಟ್ಟರೂ ನಾನು ವಹಿಸಿಕೊಳ್ಳುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ. ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ. 

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಯುವತಿ ದೂರು

ಮುಂದಿನ ಸುದ್ದಿ
Show comments