Webdunia - Bharat's app for daily news and videos

Install App

ರಾಜ್ಯದ ಮೀನುಗಾರರು ಇರಾನ್ ನಿಂದ ಬಂಧ ಮುಕ್ತ

Webdunia
ಭಾನುವಾರ, 14 ಅಕ್ಟೋಬರ್ 2018 (15:57 IST)
ಇರಾನ್ ಭದ್ರತಾ ಸಿಬ್ಬಂದಿಗಳಿಂದ ಬಂಧಿಸಲ್ಪಟ್ಟಿದ್ದ ಆರು ಜನ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರನ್ನು ಇರಾನ್ ನ್ಯಾಯಾಲಯ ಬಿಡುಗಡೆಗೊಳಿಸಿದೆ.

ದುಬೈ ನಿಂದ ಮೀನುಗಾರಿಕೆಗೆ ತೆರಳಿದ್ದ ಉತ್ತರ ಕನ್ನಡ  ಮೂಲದ 18 ಜನ ಮೀನುಗಾರರನ್ನು ಸೀಮಾ ಉಲ್ಲಂಘನೆ, ನಿಷೇಧಿತ ಪ್ರದೇಶದಲ್ಲಿ ಟೈಗರ್ ಫಿಷ್ ಬೇಟೆ ಮಾಡಿದ ಹಿನ್ನೆಲೆಯಲ್ಲಿ ಬೋಟ್ ನೊಂದಿಗೆ ಇರಾನ್ ನೌಕಾಪಡೆ ಸಿಬ್ಬಂದಿ ವಶಕ್ಕೆ ಪಡೆದಿದ್ದರು.

ಜುಲೈ 27 ರಂದು 11 ಜನ ಹಾಗೂ ಆಗಸ್ಟ್‌ 25 ರಂದು ಏಳು ಜನ ಗಡಿ ಉಲ್ಲಂಘಿಸಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ನಿಷೇಧಿತ ಪ್ರದೇಶದಲ್ಲಿ ಟೈಗರ್ ಫಿಷ್ ಹಿಡಿದು ಸೀಮೋಲ್ಲಂಘನೆ ಮಾಡಿದ್ದ ಆರು ಜನ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಭಟ್ಕಳದ ಮೀನುಗಾರರನ್ನು ಇರಾನ್ ಸರ್ಕಾರ ಜೈಲಿಗೆ ಕಳುಹಿಸಿತ್ತು.

ಉಳಿದ 12 ಜನರನ್ನು ಬೋಟಿನೊಳಗೆ ಇರಾನ್ ನೌಕಾಪಡೆ ಸಿಬ್ಬಂದಿ ಬಂಧಿಸಿದ್ದರು. 50 ದಿನದಿಂದ ಆರು ಜನರು ಜೈಲಿನಲ್ಲಿದ್ದರು.  ಇರಾನ್ ನ್ಯಾಯಾಲಯ ಬಂಧಿತರನ್ನು ಬಂಧ ಮುಕ್ತಗೊಳಿಸಿ ಆದೇಶ ನೀಡಿದೆ. ಉಳಿದ ಮೀನುಗಾರರನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಭಟ್ಕಳ, ಹೊನ್ನಾವರ ಮತ್ತು ಕುಮಟಾ ಮೂಲದ ಮೀನುಗಾರರು ದುಬೈನಲ್ಲಿ ಮೀನುಗಾರಿಕೆ ನಡೆಸಿ ಇರಾನ್ ನಲ್ಲಿ ಬಂಧನ ವಾಗಿರುವ ಕುರಿತು ಕುಟುಂಬಕ್ಕೂ ತಡವಾಗಿ ಮಾಹಿತಿ ದೊರೆತಿತ್ತು. ವಿಷಯ ತಿಳಿದ ತಕ್ಷಣದಲ್ಲಿ ಭಟ್ಕಳದ ತಂಜೀಮ್ ಸಂಘಟನೆ ಹಾಗೂ ಸ್ಥಳೀಯ ಮುಖಂಡರು ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇರಾನ್ ಸರ್ಕಾರ ಮೊದಲ ಹಂತವಾಗಿ ಆರು ಜನರನ್ನು ಬಿಡುಗಡೆ ಗೊಳಿಸಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments