Webdunia - Bharat's app for daily news and videos

Install App

ರೈತರ ಹೆಸರು ಹೇಳಿಕೊಂಡು ಮತ್ತೆ ನಂದಿನಿ ಹಾಲಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (15:55 IST)
ಬೆಂಗಳೂರು: ರೈತರ ಹೆಸರು ಹೇಳಿಕೊಂಡು ಮತ್ತೆ ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಮುಂದಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಾಗಡಿ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ಮಾಡಿ ಮಾತನಾಡಿದ ಅವರು ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಮಾಡಲಿದ್ದೇವೆ. ಈ ದರ ರೈತರಿಗೆ ಹೋಗಲಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಒಮ್ಮೆ ನಂದಿನಿ ಹಾಲಿನ ದರ ಏರಿಕೆ ಮಾಡಲಾಗಿತ್ತು.

ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಿತ್ತು. ಆದರೆ 50 ಎಂಎಲ್ ಹೆಚ್ಚು ಹಾಲು ನೀಡುತ್ತಿರುವುದಾಗಿ ಸಮಜಾಯಿಷಿ ನೀಡಿತ್ತು. ಆದರೆ ಇದರ ಬಗ್ಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ದರ ಏರಿಕೆ ಮಾಡಲಾಗಿದೆ ಎಂದು ಕಿಡಿ ಕಾರಿದ್ದರು.

ಆದರೆ ಈಗ ಮತ್ತೆ ಹಾಲಿನ ದರ ಏರಿಕೆ ಬರೆ ಗ್ರಾಹಕರಿಗೆ ತಟ್ಟಲಿದೆ. ನಾವು ಹಾಲಿನ ದರ ಏರಿಕೆ ಮಾಡುತ್ತಿರುವುದು ರೈತರಿಗೆ ನೀಡಲು. ಆದರೆ ವಿಪಕ್ಷ ಜೆಡಿಎಸ್ ಹಾಲಿನ ದರ ಏರಿಕೆ ಮಾಡಿದ ತಕ್ಷಣ ಬಾಯಿಬಡಿದುಕೊಳ್ಳುತ್ತದೆ. ನೀವೆಲ್ಲಾ ರೈತರ ಮಕ್ಕಳಾ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments